Saturday, April 6, 2024

ಪಾರೆಂಕಿ ಗ್ರಾಮದ ಒಂದನೇ ಮತ್ತು ಎರಡನೇ ವಾರ್ಡ್ ನ ಗುಂಡಿಯಲ್ಕೆ- ದಡ್ಡು ಗ್ರಾಮಸ್ಥರಿಂದ ಪಂಚಾಯತ್ ಸಹಕಾರದೊಂದಿಗೆ ಶ್ರಮದಾನ

ಮಡಂತ್ಯಾರು:  ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಗೇರಕಟ್ಟೆ ಯಿಂದ ದಡ್ಡು ರಸ್ತೆಯ ಸ್ವಚ್ಛತಾ ಕಾರ್ಯ ಹಾಗೂ ಚರಂಡಿ ಕಾಮಗಾರಿ ಮಡಂತ್ಯಾರು ಗ್ರಾ. ಪಂಚಾಯತ್ ಸಹಕಾರದೊಂದಿಗೆ, ಗೌರವಾನ್ವಿತ ಅಧ್ಯಕ್ಷರಾದ  ಶಶಿಪ್ರಭಾ ಉಪಾಧ್ಯಕ್ಷರಾದ  ಸಂಗೀತಾ ಶೆಟ್ಟಿ ಹಾಗೂ ಒಂದನೇ ಮತ್ತು ಎರಡನೇ ವಾರ್ಡ್ ನ ಸದಸ್ಯರ ಕೂಡುವಿಕೆಯೊಂದಿಗೆ, ಗ್ರಾಮಸ್ಥರ ಶ್ರಮದಾನ ಹಾಗೂ ಪ್ರೋತ್ಸಾಹದೊಂದಿಗೆ ಯಶಸ್ವಿಯಾಗಿ ನಡೆಯಿತು.

ವೀಕೆಂಡ್ ಕರ್ಫ್ಯೂನ ಸಮಯವನ್ನು ಸದ್ಬಳಕೆ ಮಾಡಿಕೊಂಡ ಆ ಭಾಗದ ಗ್ರಾಮಸ್ಥರು ಪ್ರತಿ ಮನೆಯಿಂದ ಪ್ರತಿ ಸದಸ್ಯರು ಉತ್ಸಾಹದಿಂದ ಭಾಗವಹಿಸುವುದರೊಂದಿಗೆ ಒಂದನೇ ವಾರ್ಡ್‌ ನ ಸದಸ್ಯರಾದ  ಕಿಶೋರ್ ಕುಮಾರ್ ಶೆಟ್ಟಿ, ಮೂಡಾಯೂರು ಇವರ ಮುಂದಾಳತ್ವದಲ್ಲಿ ಶ್ರೀ ಗೋಪಾಲಕೃಷ್ಣ ಕೆ. ಮತ್ತು  ರೂಪಾ ನವೀನ್ ಹಾಗೂ ಎರಡನೇ ವಾರ್ಡ್ ನ ಸದಸ್ಯರಾದ  ವಿಶ್ವನಾಥ ಪೂಜಾರಿ ಹಾರಬೆ, ಬಿಜೆಪಿ ಒಂದನೇ ವಾರ್ಡ್ ನ ಅಧ್ಯಕ್ಷರಾದ  ನವೀನ್ ಕುಮಾರ್ ಕೋಡ್ಲಕ್ಕೆ ಇವರ ಪ್ರೋತ್ಸಾಹದೊಂದಿಗೆ ಯಶಸ್ವಿಗೊಳಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...