ಬಂಟ್ವಾಳ: ಬಂಟ್ವಾಳದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಆ. 14ರಂದು ಬಿ.ಸಿ.ರೋಡಿನ ನ್ಯಾಯಾಲಯದಲ್ಲಿ ನಡೆಯುವ ಮೆಗಾ ಲೋಕ ಅದಾಲತ್ನಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇಚ್ಛಿಸುವ ಸಾರ್ವಜನಿಕರು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.