Tuesday, July 1, 2025

ಅತ್ಯಾಚಾರಕ್ಕೊಳಗಾದ ಯುವತಿಯ ಮನೆಗೆ ಭೇಟಿ, ಸಾಂತ್ವಾನ ನೀಡಿದ ಸಂಸದ ನಳಿನ್

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಕಳೆದ ಐದಾರು ವರ್ಷಗಳಿಂದ ಗಾಂಜಾ ಮಾಫಿಯಾಗಳು ಸರಕಾರವನ್ನೇ ಕಪಿಮುಷ್ಟಿಯಲ್ಲಿಟ್ಟುಕೊಂಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಸಾಮೂಹಿಕ ಅತ್ಯಾಚಾರ ಇಡೀ ಜಿಲ್ಲೆಯ ಜನ ತಲೆ ತಗ್ಗಿಸುವ ಕೆಲಸ ಮಂಗಳೂರಿನಲ್ಲಿ ನಡೆದಿದೆ. ಈ ಘಟನೆ ಸರಕಾರದ ವೈಫಲ್ಯವನ್ನು ಎತ್ತಿತೋರಿಸುತ್ತದೆ. ಶೀಘ್ರವಾಗಿ ಆರೋಪಿಗಳನ್ನು ಬಂಧಿಸಿದ ಪೋಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸ್ ಮುಂದಾಗಬೇಕು.‌ ಘಟನೆಯಿಂದ ನೊಂದಿರುವ ಹುಡುಗಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಡಕುಟುಂಬಕ್ಕೆ ಪರಿಹಾರ ನೀಡಬೇಕು, ದೈರ್ಯ ತುಂಬಿ, ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು. ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ದ.ಕ.ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳಿಗೆ ಕೇಂದ್ರ ಸರಕಾರ 720 ಕೋಟಿ ಮಂಜೂರು ಮಾಡಿದೆ, 541.28 ಕೋಟಿ ಪ್ಯಾಕೇಜ್ ಬಿಡುಗೊಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಮನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಎರಡು ಜಿಲ್ಲೆಯ ಜಿಲ್ಲಾಧಿಕಾರಿ ಗಳು ಫಲಾನುಭವಿಗಳಿಗೆ ಶೀಘ್ರವಾಗಿ ಸರಿಯಾದ ರೀತಿಯಲ್ಲಿ ತಲುಪಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕೊಲೆರೋಗದಿಂದ ಕಂಗಲಾದ ಅಡಿಕೆ ಬೆಳೆಗಾರರಿಗೆ ರಾಜ್ಯ ಸರಕಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಶಾಸಕ ರಾಜೇಶ್ ನಾಯಕ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಜಿಲ್ಲಾ ಎಸ್.ಸಿ.ಮೋರ್ಚಾ ದ ಅಧ್ಯಕ್ಷ ದಿನೇಶ್ ಅಮ್ಟೂರು, ಜಿ.ಪಂ.ಸದಸ್ಯೆ ಕಮಾಲಾಕ್ಷೀ ಕೆ.ಪೂಜಾರಿ, ಪ್ರಮುಖರಾದ ರಮಾನಾಥ ರಾಯಿ, ಮೋಹನ್ ಪಿ.ಎಸ್.ಮತ್ತಿತರರು ಉಪಸ್ಥಿತರಿದ್ದರು. ‌

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...