Sunday, February 9, 2025

ಕಸ ಸಂಗ್ರಹ ವಾಹನಕ್ಕೆ ಚಾಲನೆ

ಬಂಟ್ವಾಳ: ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ವಾಹನದ ಮೂಲಕ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಯಕ್ಕೆ ಪುದು ಗ್ರಾಮ ಪಂಚಾಯತಿ ಕಚೇರಿ ಮುಂದೆ ಶನಿವಾರ ಚಾಲನೆ ನೀಡಲಾಯಿತು.
ಬಂಟ್ವಾಳ ತಾಲೂಕು ಪಂಚಾಯತಿ ಕಾರ್ಯನಿರ್ವಹಾಣಾಧಿಕಾರಿ ರಾಜಣ್ಣ ಅವರು ಕಸ ಸಂಗ್ರಹಿಸುವ ವಾಹನಕ್ಕೆ ತ್ಯಾಜ್ಯ ಸುರಿಯುವ ಮೂಲಕ ಪಂಚಾಯತಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪಂಚಾಯತ್ ಕೈಗೊಂಡಿರುವ ಈ ಕಾರ್ಯ ಅಭಿನಂದನೀಯವಾದುದು, ಗ್ರಾಮದ ಸ್ವಚ್ಛತೆಯ ದೃಷ್ಟಿಯಿಂದ ಪ್ರತಿಯೋಬ್ಬ ನಾಘರಿಕನೂ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸ ಸಂಗ್ರಹಿಸುವ ವಾಹನಗಳು ಮನೆ ಮನೆಗೆ ಬಂದಾಗ ನೀಡಿ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
ಪುದು ಗ್ರಾಮ ಪಂಚಾಯತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ ಪುದು ಗ್ರಾಮ ಪಂಚಾಯತ್ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದು ಬೇರೆ ಗ್ರಾಮಗಳ ಜನರು ಬಂದು ಇಲ್ಲಿ ಕಸ ಎಸೆದು ಹೋಗುತ್ತಿದ್ದಾರೆ. ಮನೆಮನೆಗೆ ಕಸ ಸಂಗ್ರಹಣೆಯ ವಾಹನಗಳು ಬಂದಾಗ ಎಲ್ಲಾ ಜನರು ಕಸ ನೀಡಬೇಕು, ಈ ಮೂಲಕ ರಸ್ತೆ ಪಕ್ಕ ಕಸ ಎಸೆಯುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಸಾಹಿತಿ ಮಹಮ್ಮದ್ ಮಾರಿಪಳ್ಳ ಸ್ವಚ್ಛತೆ ಗೀತೆ ಹಾಡಿದರು. ಪಂಚಾಯತಿ ಉಪಾಧ್ಯಕ್ಷೆ ಲೀಡಿಯಾ ಪಿಂಟೋ, ಸದಸ್ಯರಾದ ಇಕ್ಬಾಲ್ ಸುಜೀರ್, ಝಾಹೀರ್, ರಿಯಾಝ್ ಕುಂಪಣ ಮಜಲು, ರಿಯಾಝ್ ಅಮ್ಮೆಮಾರ್, ಮುಸ್ತಾಫ ಅಮ್ಮೆಮಾರ್, ರಝಾಖ್ ಅಮ್ಮೆಮಾರ್, ಮಮ್ತಝ್, ರಯಾನಾ, ರಶೀದಾ, ಲಕ್ಷ್ಮಿ, ಆಶಾನಯನ, ಮನೋಜ್ ಆಚಾರ್ಯ, ಸಂತೋಷ್, ಕಿಶೋರ್, ಭಾಸ್ಕರಮ, ನಝೀರ್, ಲವಿನಾ, ಶೋಭಾ, ಜಯಂತಿ, ಸರೋಜಿನಿ, ನಾಗವೇಣಿ, ಹೇಮಾಲತಾ, ಪಿಡಿಓ ಪ್ರೇಮಲತಾ, ಪ್ರಮುಖರಾದ ಮಹಮ್ಮದ್ ಬಾವಾ, ಟಿ.ಕೆ. ಬಶೀರ್, ಮಜೀದ್ ಫರಂಗಿಪೇಟೆ, ಸಿಬ್ಬಂದಿಗಳಾದ ಅಬ್ದುಲ್ ಸಲಾಂ, ವಿನಯ, ಯಶೋಧಾ, ಸುರೇಖಾ, ಮಹಮ್ಮದ್ ಕೈಪ್ ಮತ್ತಿತರರು ಹಾಜರಿದ್ದರು. ಬಳಿಕ ನಡೆದ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸ್ವಚ್ಛತೆಯ ಬಗ್ಗೆ ಕಾರ್ಯನಿರ್ವಾಹಣಾಧಿಕಾರಿ ರಾಜಾಣ್ಣ ಸದಸ್ಯರಿಗೆ ಮಾರ್ಗದರ್ಶನ ಮಾಡಿದರು.

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...