Tuesday, July 1, 2025

ಡಿ.1 ರಂದು ಸರಪಾಡಿಯಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ

ಬಂಟ್ವಾಳ; ಡಿ.1 ರಂದು ಯುವಕ ಮಂಡಲದ ಅವರಣದಲ್ಲಿ ಯುವಕ ಮಂಡಲ ಸರಪಾಡಿ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟವು ನಡೆಯಲಿದೆ ಎಂದು ಯುವಕ ಮಂಡಲದ ಗೌರವ ಸಲಹೆಗಾರ ಸರಪಾಡಿ ಆಶೋಕ ಶೆಟ್ಟಿ ತಿಳಿಸಿದ್ದಾರೆ.
ಶುಕ್ರವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ವೇಳೆ ಸುಸಜ್ಜಿತ ಅಡುಗೆ ಕೋಣೆಯ ಉದ್ಘಾಟನೆ ಹಾಗೂ ದಿ.ಪಟ್ಲಕೆರೆ ನಾರಾಯಣಶಾಂತಿ ಅವರ ಸ್ಮರಣಾರ್ಥ ಸಭಾಂಗಣಕ್ಕೆ ಶಿಲಾನ್ಯಾಸವನ್ನು ನೆರವೇರಿಸಲಾಗುವುದು ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಲಿದ್ದು,ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸರಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ,ಮಾಜಿ ಸಚಿವ ನಾಗರಾಜ ಶೆಟ್ಟಿ ಮೊದಲಾದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದ ಅವರು,ಈ ಸಂದರ್ಭ ಸಂಘದ ಏಳಿಗೆಗೆ ಶ್ರಮಿಸಿದ ಮಾಜಿ ಕಾರ್ಯದರ್ಶಿ,ಹಿರಿಯರಾದ ಜಾರಪ್ಪ ಶೆಟ್ಟಿ ಖಂಡಿಗ ಅವರನ್ನು ಸನ್ಮಾನಿಸಲಾಗುವುದು ಮತ್ತು ನಟ ರವಿ ಸಾಲಿಯಾನ್, ರಾಷ್ಟ್ರಮಟ್ಟದ ಕಬಡ್ಡಿ ಪಟು ಸುಶ್ಮಿತಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು. ಈ ಪಂದ್ಯಾಟದಲ್ಲಿ ಅಮೆಚೂರು ಎಸೋಸಿಯೇಶನ್ ನಲ್ಲಿ ನೋಂದಾಯಿಸಲ್ಪಟ್ಟ ಬಲಿಷ್ಠ 24 ತಂಡಗಳು ಭಾಗವಹಿಸಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಯುವಕ ಮಂಡಲದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ, ಪ್ರಕಾಶ್ಚಂದ್ರ ಆಳ್ವ,ಕಿಶನ್ ಸರಪಾಡಿ ಉಪಸ್ಥಿತರಿದ್ದರು

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...