Tuesday, July 1, 2025

ಪೆರಾಜೆ ವಿಷ್ಣುಮೂರ್ತಿ ದೇವಸ್ಥಾನ ದ ಜೀರ್ಣೋದ್ಧಾರ : ಪೂರ್ವಭಾವಿ ಸಭೆ

ಬಂಟ್ವಾಳ: ಪುರಾತನ ಪ್ರಸಿದ್ಧ *ಪೆರಾಜೆ ವಿಷ್ಣುಮೂರ್ತಿ ದೇವಸ್ಥಾನ* ದ ಜೀರ್ಣೋದ್ಧಾರ ದ ಬಗ್ಗೆ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ನಡೆಯಿತು.. ಈ ದೇವಾಲಯ ವು ಸುಮಾರು ಐದುನೂರು ವರ್ಷಗಳ ಹಿಂದಿನದ್ದಾಗಿದ್ದು ಕೆಲವು ವರ್ಷಗಳ ಹಿಂದೆ ದೇವರ ಗರ್ಭಗುಡಿ, ತೀರ್ಥಮಂಟಪವು ಊರ, ಪರವೂರ ಭಗವಧ್ಬಕ್ತರ ನೆರವು, ಶ್ರಮದೊಂದಿಗೆ ಪುನರುಜ್ಜೀವನಗೊಂಡು ಬ್ರಹ್ಮಕಲಶ ನೇರೆವೇರಿದ್ದು ಪ್ರಸ್ತುತ ದೇವಾಲಯ ದ *ಸುತ್ತುಗೋಪುರ, ಬೋಜನಾಲಯ, ಅರ್ಚಕರ ಮನೆ* ಆಗಬೇಕಿದ್ದು ಈ ನಿಟ್ಟಿನಲ್ಲಿ ಪೆರಾಜೆ ಗ್ರಾಮಸ್ಥರ ಸಲಹೆ ಸೂಚನೆಗಳನ್ನು, ಸಹಕಾರಗಳನ್ನು ಪಡೆಯಲು ಡಿ 02 ರ ಆದಿತ್ಯವಾರ ದೇವಾಲಯ ದ ವಠಾರದಲ್ಲಿ ಸಭೆ ನಡೆಯಿತು .ಈ ಸಭೆಯಲ್ಲಿ ವಿಷ್ಣುಮೂರ್ತಿ ದೇವಸ್ಥಾನ ದ ಆಡಳಿತ ಸಮಿತಿಯ ಆಧ್ಯಕ್ಷರಾದ ಶ್ರೀ ಅಪ್ರಾಯ ಪೈ ಕೋಶಾಧಿಕಾರಿಡಾ.ಶ್ರೀನಾಥ್ ಆಳ್ವಉಪಾಧ್ಯಕ್ಷರುಶ್ರೀ ಕುಶಾಲ ಯಂ.ಪೆರಾಜೆಕಾರ್ಯದರ್ಶಿ ಶ್ರೀ ಜನಾರ್ದನ ಪೆರಾಜೆ, ವ್ಯವಸ್ಥಾಪನ ಸದಸ್ಯರಾದ ಸುಂದರ ಬಂಗೇರ, ರಾಮಣ್ಣ ಗೌಡ, ಚಂದ್ರಹಾಸ ಶೆಟ್ಟಿ ಹಿರಿಯರಾದ ಮೋಹನದಾಸ್ ಹೆಗ್ಡೆ , ಬಿ.ಟಿ.ನಾರಾಯಣ ಭಟ್, ಶ್ರೀಕಾಂತ್ ಆಳ್ವ ಪೆರಾಜೆ ಗುತ್ತು, ಜಯರಾಮ ರೈ ಪಂಚಾಯತ್ ಅದ್ಯಕ್ಷ ರಾದ ಪುಷ್ಪ , ಪಂಚಾಯತ್ ಸದಸ್ಯರಾದ ತಿಮ್ಮಪ್ಪ ಗೌಡ,ಉಮೇಶ್ ಎಸ್. ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...