Tuesday, July 1, 2025

ಪ್ಲಾಟ್ ಗಳಿಗೆ ನೋಟೀಸ್ ನೀಡಿ ಪುರಸಭಾ ಅಧಿಕಾರಿಗೆ ಶಾಸಕ ರಾಜೇಶ್ ನಾಯಕ್ ಸೂಚನೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಮೊಡಂಕಾಪು ಭಾಗದಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದೆ ರೋಗದ ಭೀತಿಯಲ್ಲಿರುವ ಈ ಭಾಗದ ಸಾರ್ವಜನಿಕರ ದೂರಿನ‌ ಹಿನ್ನಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಸಂಬಂಧಿಸಿದ ಅಧಿಕಾರಿಗಳ ಸಹಿತ ಸ್ಥಳಕ್ಕೆ ಭೇಟಿ ನೀಡಿದರು.
ಈ ಭಾಗದಲ್ಲಿ ನಿರ್ಮಾಣವಾದ ಖಾಸಗಿ ಪ್ಲಾಟ್ ಗಳಿಂದ ನೇರವಾಗಿ ಕೊಳಕು‌ ನೀರು ಮತ್ತು ರಾತ್ರಿ ಹೊತ್ತಲ್ಲಿ ಟ್ಲಾಯೆಟ್ ನೀರನ್ನು ಪಂಪ್ ಮೂಲಕ ಮಳೆ ನೀರು ಹರಿದು ಹೋಗುವ ಕಣಿವೆಗೆ ಬಿಡಲಾಗುತ್ತಿದ್ದು ಜನರು ರೋಗದ ಭೀತಿಯಿಂದ ನರಳುತ್ತಿದ್ದಾರೆ.
ಇಲ್ಲಿನ ನಿವಾಸಿಗಳ ಬಾವಿಗೆ ಗಲೀಜು ನೀರು ಇಂಗುತ್ತಿದ್ದು ನೀರನ್ನು ಬಳಸಲಾಗುತ್ತಿಲ್ಲ, ಜೊತೆಗೆ ಇಲ್ಲಿನ ‌ನಿವಾಸಿಗಳಿಗೆ ತುರಿಕೆ ಮತ್ತು ಸಾಂಕ್ರಮಿಕ ರೋಗಗಳು ಬಂದಿದ್ದು ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ನಿನ್ನೆ ಶಾಸಕರ ಬಳಿ ಸಮಸ್ಯೆ ಹೇಳಿಕೊಂಡಿದ್ದಾರೆ.

ಇವತ್ತು ಶಾಸಕರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ರಾಜೇಶ್ ನಾಯಕ್ ಅವರು ಶೀಘ್ರವಾಗಿ ಇವರಿಗೆ ಸಮಸ್ಯೆ ಪರಿಹರಿಸುವ ತಾತ್ಕಾಲಿಕ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಎಲ್ಲಾ ಪ್ಲಾಟ್ ಮಾಲೀಕರಿಗೆ ‌ನೋಟಿಸ್ ಜಾರಿ ಮಾಡಲು ಹೇಳಿದರು.
ಇನ್ನು ಮುಂದಿನ ದಿನಗಳಲ್ಲಿ ಪ್ಲಾಟ್ ಗಳಿಗೆ ಪರವಾನಿಗೆ ನೀಡುವಾಗ ಇಂತಹ ಸಮಸ್ಯೆಗಳು ಬರದಂತೆ ಎಚ್ಚರ ವಹಸಿ ಪರವಾನಿಗೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಲೋಲಾಕ್ಷ, ಬಂಟ್ವಾಳ ಬಿಜೆಪಿ ಅದ್ಯಕ್ಷ ದೇವದಾಸ ಶೆಟ್ಟಿ, ಮಾಜಿ ಪುರಸಭಾ ಸದಸ್ಯರಾದ, ಜನಾರ್ಧನ ಬೊಂಡಾಲ, ಸುರೇಶ್ ಟೈಲರ್, ಪ್ರಮುಖರಾದ ಪ್ರಮೋದ್ ಕುಮಾರ್, ಸತೀಶ್ ಶೆಟ್ಟಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಪುರಾಣಿಕ್ , ಒಳಚರಂಡಿ ಯೋಚನೆ ಅಧಿಕಾರಿ ರೇಖಾ, ಇಂಜಿನಿಯರ್ ಡೋಮೆನಿಕ್ ಡಿಮೆಲ್ಲೋ ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...