Wednesday, July 9, 2025

ಬಂಟ್ವಾಳ ತಾಲೂಕಿನಲ್ಲಿ ಪ್ರಥಮ ಕೊರೊನೊ ಪ್ರಕರಣ ಪತ್ತೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದಲ್ಲಿ ಎಳೆಯ ಕಂದಮ್ಮನಿಗೆ ಪ್ರಥಮ ಕೊರೊನೊ ಪ್ರಕರಣ ಪತ್ತೆಯಾಗಿದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಅಧಿಕೃತ ವಾಗಿ ಘೋಷಣೆ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ಲ್ಲಿ 10 ತಿಂಗಳ ಕಂದಮ್ಮನಿಗೆ ಕೊರೊನೊ ಪತ್ತೆ ಎಂಬ ಸುದ್ದಿ
ಜಿಲ್ಲೆಯ ಜನತೆಗೆ ಆತಂಕವನ್ನುಂಟುಮಾಡಿದೆ.
ಮಗುವನ್ನು ಪಕ್ಕದ ಕೇರಳ ರಾಜ್ಯದ ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗಲಾಗಿತ್ತು ಎಂಬ ಮಾಹಿತಿ ಇದ್ದು ಇನ್ನಷ್ಟೇ ತಿಳಿಯಬೇಕಾಗಿದೆ.

ಈ ಮೂಲಕ ಜಿಲ್ಲೆಯ ಲ್ಲಿ ಒಟ್ಟು ಕೊರೊನೊ ಪ್ರಕರಣಗಳ ಸಂಖ್ಯೆ ಆರಕ್ಕೇರಿತು.
ಈವರಗೆ ಹೊರಗಿನಿಂದ ವ್ಯಕ್ತಿಗಳಿಗೆ ಮಾತ್ರ ಸೊಂಕು ತಗಲಿತ್ತು ಸಾಮುದಾಯಿಕ ವಾಗಿಲ್ಲ ಎಂಬ ವಿಶ್ವಾಸದ ಮೂಲಕ ಜನ ಬೇಕಾಬಿಟ್ಟಿ ತಿರುಗಾಡ ನಡೆಸುತ್ತಿದ್ದರು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರೆತಿದ್ದರು.
ಇನ್ನು ಮುಂದೆ ಹಾಗಾಗಲ್ಲ ಅಧಿಕಾರಿಗಳು ಹೆಚ್ಚಿನ ಕ್ರಮಕೈಗೊಳ್ಳುವ ಸಾಧ್ಯತೆ ಗಳಿವೆ.

ಸಜೀಪ ನಡು ಗ್ರಾಮದ ಲಕ್ಷಣ ಕಟ್ಟೆ ಎಂಬಲ್ಲಿ ನ 10 ತಿಂಗಳ ಪುಟ್ಟ ಮಗುವಿನಲ್ಲಿ ಕೊರೊನೊ ಪ್ರಕರಣ ಪತ್ತೆಯಾಗಿದ್ದು ಇಲ್ಲಿನ ಸುತ್ತಮುತ್ತ ಸಾಕಷ್ಟು ಬಿಗಿ ಭದ್ರತೆ ಯನ್ನು ಮಾಡಲಾಗಿದೆ.
ಈವರೆಗೆ ವಿದೇಶದಿಂದ ಬಂದ ವ್ಯಕ್ತಿಗಳಲ್ಲಿ ಮಾತ್ರ ಕೊರೊನೊ ಪ್ರಕರಣ ಪತ್ತೆಯಾಗಿತ್ತು, ಆದರೆ ಪ್ರಸ್ತುತ ಸಜೀಪದ ಗ್ರಾಮೀಣ ಪ್ರದೇಶದ ಮಗುವಿನಲ್ಲಿ ಕೊರೊನೊ ಪತ್ತೆಯಾದ ಪ್ರಥಮ ಪ್ರಕರಣವಾಗಿದ್ದು ಜಿಲ್ಲೆಯ ಹಾಗೂ ತಾಲೂಕಿನ ಜನರನ್ನು ಭಯಭೀತರನ್ನಾಗಿಸಿದೆ.
ಈ ಪ್ರದೇಶದ ಸುತ್ತಮುತ್ತಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇವರ ಮನೆಗೂ ಯಾರು ಹೋಗದಂತೆ ಈಗಾಗಲೇ ಬಂಟ್ವಾಳ ಗ್ರಾಮಾಂತರ ಎಸ್.ಐ ಪ್ರಸನ್ನ ನೇತ್ರತ್ವದಲ್ಲಿ ನಾಕಾ ಬಂದಿ ಮಾಡಲಾಗಿದೆ.
ಈ ಗ್ರಾಮಕ್ಕೆ ಬರುವಂತಿಲ್ಲ ಹಾಗೂ ಹೊರಗೆ ಹೋಗದಂತೆ ಪೋಲೀಸರು ಸಂಪೂರ್ಣ ಬಂದ್ ಮಾಡಿದ್ದಾರೆ.
ಅಲ್ಲಿನ ಸ್ಥಳೀಯ ನಿವಾಸಿಗಳಿಗೂ ಎಚ್ಚರಿಕೆ ನೀಡಲಾಗಿದೆ.
ಗುರುವಾರ ಸಂಜೆಯ ವೇಳೆಗೆ ಈ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಜಿಲ್ಲಾಧಿಕಾರಿ ಆದೇಶಕ್ಕೆ ಜನರು ಕಾದುಕುಳಿತ್ತಿದ್ದರು.

ಈ ನಡುವೆ ಸಜೀಪನಡು ವಿನಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಸುಳ್ಳು ಮಾಹಿತಿ ಎಂದು ಬರೆದು ಅದು ಸಾಮಾಜಿಕ ‌ಜಾಲತಾಣದಲ್ಲಿ ಹರಿದಾಡುತ್ತಿತ್ತು.ಒಟ್ಟಿನಲ್ಲಿ ಇಲ್ಲಿನ ಜನರನ್ನು ಗೊಂದಲಕ್ಕೆ ಎಡೆ ಮಾಡಿಕೊಟ್ಟಿತು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...