Saturday, February 8, 2025

ಬಾಳ್ತಿಲ: “ಸಂಜೀವಿನಿ” ಸ್ತ್ರೀ ಶಕ್ತಿ ಗ್ರಾಮ ಒಕ್ಕೂಟಕ್ಕೆ ಚಾಲನೆ


ಬಂಟ್ವಾಳ : ಬಂಟ್ವಾಳ ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಬಾಳ್ತಿಲ ಗ್ರಾಮ ಪಂಚಾಯತ್ ನಲ್ಲಿ “ಸಂಜೀವಿನಿ” ಸ್ತ್ರೀ ಶಕ್ತಿ ಗ್ರಾಮ ಒಕ್ಕೂಟಕ್ಕೆ ಚಾಲನೆ.
ಬಾಳ್ತಿಲ ಗ್ರಾಮದ ಎಲ್ಲಾ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಳು ಸೇರಿಕೊಂಡು ತಮ್ಮ ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ಉತ್ಪಾದನಾ ಚಟುವಟಿಕೆಗಳನ್ನು ನಡೆಸಲು ಪಂಚಾಯತ್ ಮಟ್ಟದ “ಕಲ್ಪತರು ” ಸಂಜೀವಿನಿ ಒಕ್ಕೂಟಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.

ಮಹಿಳೆಯರು ಮುನ್ನಡೆಸುವ ಟೈಲರಿಂಗ್, ಬಟ್ಟೆ ಚೀಲ ತಯಾರಿಕೆ, ಬೇಕರಿ ಉತ್ಪನ್ನಗಳು, ಚೆಂಡು ಹೂ ಕೃಷಿ,ಮಾರಾಟ ಮಳಿಗೆ ಇತ್ಯಾದಿಗಳಿಗೆ ಬ್ಯಾಂಕ್ ಮತ್ತು ನರೇಗಾದ ಮೂಲಕ ಒದಗಿಸುವ NRLM ಶೆಡ್ ನಲ್ಲಿ ಮಹಿಳೆಯರು ಈ ಚಟುವಟಿಕೆಗಳನ್ನು ಮಾಡಬಹುದಾಗಿದೆ. ಈ ಕಾರ್ಯಕ್ರಮದಲ್ಲಿ CEO ರವರು ಚೆಂಡು ಹೂ ಬೀಜ ಹಾಕಿ, ತೆಂಗಿನ ಸಸಿ ನೆಟ್ಟು ಯೋಜನೆಯ ಮಾಹಿತಿ ನೀಡಿದರು. ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾ. ಪಂ. ಅಧ್ಯಕ್ಷರಾದ ಶ್ರೀ ವಿಠಲ್ ‘ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಹಕರಿಸಿ, ಆರ್ಥಿಕ ಸ್ವಾವಲಂಬನೆಗೆ ಬೆಂಬಲವಾಗಿ ನಿಲ್ಲುವುದಾಗಿ’ ತಿಳಿಸಿದರು.
ಸಭೆಯಲ್ಲಿ ಜಿ. ಪಂ. ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾ. ಪಂ. ಸದಸ್ಯೆ ಲಕ್ಷ್ಮೀಗೋಪಾಲಾಚಾರ್ಯ, ಪಂ. ಉಪಾಧ್ಯಕ್ಷೆ ಪೂರ್ಣಿಮ,ತಾ.ಪಂ.ವಿವಿಧ ಅಧಿಕಾರಿಗಳು, ಯೋಜನಾ ನಿರ್ದೇಶಕರು, ಗ್ರಾ.ಪಂ.ಸದಸ್ಯರು, ಒಕ್ಕೂಟದ ಸದಸ್ಯೆಯರು, ಪಂಚಾಯತ್ ಸಿಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ತಾ. ಪಂ. EO ರಾಜಣ್ಣ,ಪ್ರಾಸ್ತಾವಿಕ ಭಾಷಣ ಮಾಡಿದರು. PDO ಸಂಧ್ಯಾ ಸ್ವಾಗತಿಸಿ, ಪೂರ್ಣಿಮ ವಂದಿಸಿದರು. ಗ್ರಾ. ಪಂ. ಸದಸ್ಯ ವೆಂಕಟ್ರಾಯ ಪ್ರಭು ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೂತನ “ಬಾಪೂಜಿ ಸೇವಾ ಕೇಂದ್ರ”ವನ್ನು ಉದ್ಘಾಟಿಸಲಾಯಿತು. ಸಭೆಯ ಬಳಿಕ CEOರವರು ಒಕ್ಕೂಟದ ಮಹಿಳಾ ಸದಸ್ಯರೊಂದಿಗೆ ಸಂವಾದ ನಡೆಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...