Friday, January 30, 2026

ಸರಪಾಡಿ: ನಗರ ಭಜನೆ ಮಹೋತ್ಸವಕ್ಕೆ ಚಾಲನೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಸರಪಾಡಿ ಯುವಕ ಮಂಡಲವು ಆಯೋಜಿಸುತ್ತಿರುವ ೫ನೇ ವರ್ಷದ ನಗರ ಭಜನೆ ಮಹೋತ್ಸವವು ಶನಿವಾರ ರಾತ್ರಿ ದೇವಸ್ಥಾನದಿಂದ ಪ್ರಾರಂಭಗೊAಡಿತು.
ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಅವರು ಪ್ರಾರ್ಥನೆ ನೆರವೇರಿಸಿ, ಪ್ರತಿದಿನದ ಭಜನಾ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಿದರು. ಅರ್ಚಕ ಜಯರಾಮ ಕಾರಂತ, ಪುರೋಹಿತ ಅರುಣ ಐತಾಳ್ ಅವರು ಸಹಕರಿಸಿದರು. ಬಳಿಕ ಕ್ಷೇತ್ರದ ಅಗ್ರಹಾರ ಬೀದಿಯ ಮನೆಗಳಲ್ಲಿ ಭಜನಾ ಕಾರ್ಯ ನಡೆಸಲಾಯಿತು. ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುರೋಹಿತ ದಯಾನಂದ ಐತಾಳ್ ಅರಮನೆ ಅವರ ಉಪಸ್ಥಿತಿಯಲ್ಲಿ ಭಜನೆ ನೆರವೇರಿಸಲಾಯಿತು.
ಕ್ಷೇತ್ರದ ಮೊಕ್ತೇಸರರಾದ ಉಮೇಶ್ ಆಳ್ವ ಕೊಟ್ಟುಂಜ, ಸುರೇಂದ್ರ ಪೈ ಎಸ್, ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಶೆಟ್ಟಿ ಪಿ, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಓಡದಡ್ಕ, ರಾಧಾಕೃಷ್ಣ ರೈ ಕೊಟ್ಟುಂಜ, ಎಸ್.ಪಿ.ಸರಪಾಡಿ, ಪ್ರಕಾಶ್ಚಂದ್ರ ಆಳ್ವ ಪಿ, ಸತೀಶ್ ಪೂಜಾರಿ ಬೊಳ್ಳೂರು, ಗಿರೀಶ್ ನಾಯ್ಕ್ ನೀರಪಲ್ಕೆ, ಆನಂದ ಶೆಟ್ಟಿ ಆರುಮುಡಿ, ದಯಾನಂದ ದರ್ಖಾಸು, ರಾಹುಲ್ ದರ್ಖಾಸು, ಯೋಗೀಶ್ ನೀರಪಲ್ಕೆ, ಚೇತನ್ ಬಜ, ಯೋಗೀಶ್ ಗೌಡ ನೀರೊಲ್ಬೆ, ಪ್ರದೀಪ್ ರೈ ಮಾವಿನಕಟ್ಟೆ, ಕಿಶನ್ ಎಸ್, ನಿತಿನ್ ಬಜ, ವಚನ್ ಬಜ, ವಿಜೇತ್ ಶೆಟ್ಟಿ ಹಾಲಾಡಿ ಮೊದಲಾದವರಿದ್ದರು.

More from the blog

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...