Friday, February 7, 2025

ಸಾಲ ಬಾಧೆಯಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆಯಿಂದ ಮನನೊಂದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮೊಗರ್ನಾಡು ನಿವಾಸಿ ಅಶೋಕ್ (42) ಅವರು ಆತ್ಮಹತ್ಯೆ ಮಾಡಿಕೊಂಡವರು.
ಆಶೋಕ್ ಅವರು ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದರು, ಪಾಣೆಮಂಗಳೂರು ಪಾರ್ಕ್ ನಲ್ಲಿ ರಿಕ್ಷಾ ಒಡಿಸುತ್ತಿದ್ದ ಇವರು ಇತ್ತೀಚೆಗೆ ಹೊಸ ಮನೆ ಕಟ್ಟಿದ್ದರು.
ಅವರು ಈ ಮನೆ ಮಾಡುವ ಸಂದರ್ಭದಲ್ಲಿ ಬ್ಯಾಂಕ್ ಸಾಲ ಮಾಡಿದ್ದಾರೆ. ಈ ಸಾಲವನ್ನು ತೀರಿಸಲು ಸಾಧ್ಯವಿಲ್ಲ ದೆ ಕೊನೆಗೆ ಮನೆಯನ್ನು ಮಾರಿ ಅದೇ ಮನೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.‌ ಆದರೆ ಇತ್ತೀಚೆಗೆ ಸಾಲದಿಂದ ಮನೆಯನ್ನು ಮಾರಾಟ ಮಾಡಿದ ಮೇಲೆ ಮನನೊಂದಿದ್ದರು ಎಂದು ಮನೆಯವರು ತಿಳಿಸಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...