Wednesday, June 25, 2025

*ಸ್ವಲ್ಪ ಬನ್ನಿ ಇಲ್ಲಿ ಎಲ್ಲ!*

ಹಣೆಯಲೇ ಇಲ್ಲದ ಗೆರೆಗಳ
ಅಂಗೈಲಿ ಹುಡುಕುವ ಜ್ಯೋತಿಷಿ
ಗಳಿಗೆ ಜೋತು ಬಿದ್ದಿರುವ ಮೂಢ
ಹುನ್ನಾರಕೆ ಅದೆಷ್ಟು ಬಲಿಗಳು!
ಜಗದ ಜನರನುದ್ಧರಿಸುವ
ಪಂಡಿತನ ಮೂರ್ಖ ಮುಖ
ಮಂಟಪದ ಮುಂದೆ ಅದೆಷ್ಟು
ಬಿರುದು ಬಾವಲಿಗಳು!

ಏರಿಳಿತ,ಹಗಲು ರಾತ್ರಿ
ನೋವು ನಲಿವಿನಲಿ ನಿಲ್ಲದ
ಬದುಕಿನಲೇ ಎಲ್ಲ ಸಾಗಿರುವಾಗ
ಬಂದುದನು ಎದೆಗೊತ್ತಿ ಸಾಗುವ
ಧೈರ್ಯಗೈಯದೆ ಪುಂಡ
ಪೋಕರಿಗಳ ಕಾಲಡಿಯಲ್ಲಿ ಘಟವ
ಚೆಲ್ಲಿ ಗೋಗರೆಯುವ ತಂಡ
ವಿತಂಡ ಮನಸುಗಳು!

ಉಸಿರಿಗಿರುವನು ಪವನ
ಹಸಿರಿಗಿಲ್ಲಿದೆ ಸಿರಿವನ ಬಿಸಿಲು
ಬೆಳಕಿಗುಂಟು ದಿನಕರ
ಇರುಳ ರಸ ಕುಡಿಯಲಲ್ಲಿದೆ
ಮೇಲೆ ತಿಳಿ ಮುಗಿಲು ಚಂದ್ರ
ತಾರೆ, ಬೆಸಗೈಯ್ವ ಭಾವ
ಭಾಷೆಗಿಲ್ಲಿಲ್ಲ ಇನಿತು ತೊಂದರೆ
ನನಸುಗಳ ಧಿಕ್ಕರಿಸಿ ಕನಸು
ಗಳಡಿಯಲಿ ನರಳುತಿರುವ
ಕುಂಟು ನೆಪಗಳು!

ಅವಸರಕೆ ಸರಮಾಲೆ ಹಾಕಿ
ಉಸಿರುಗರೆಯುತ್ತ ಏಗುವ
ಬದುಕನೆ ತಮ್ಮದಾಗಿಸಿಕೊಂಡು
ಹಪಹಪಿಸುವ ತುಡಿತಕೆ ತೋರಣ
ಕಟ್ಟಿ ಸುಖದ ಭಟ್ಟಿ ಇಳಿಸುವ
ಕಾಯಕವ ಬಿಸುಟದಿರೆ ಇನ್ನೆಲ್ಲಿ
ಕಾಣುವಿರಿ ಸುಖ ಸಂತಸ?
ಬೇಡ ಬನ್ನಿ ಇಲ್ಲೇ ಹುಡುಕುವ
ನಂಮಾಳದಲೇ ಢಾಳಾಗಿವೆ
ಎಲ್ಲ ದಿನಸುಗಳು!

#ನೀ.ಶ್ರೀಶೈಲ ಹುಲ್ಲೂರು
ಜಮಖಂಡಿ – 58730

More from the blog

Railway – ರೈಲು ಪ್ರಯಾಣಿಕರಿಗೆ ದರ ಏರಿಕೆ ಬಿಸಿ.. ಜುಲೈ 1ರಿಂದ ಟಿಕೆಟ್ ದರ ಹೆಚ್ಚಳ!

ಭಾರತೀಯ ರೈಲ್ವೆ ಪ್ರಯಾಣ ದರವನ್ನು ಹೆಚ್ಚಿಸಲು ಸಿದ್ಧವಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ನಾನ್-AC ಮೇಲ್/ಎಕ್ಸ್‌ಪ್ರೆಸ್ ರೈಲುಗಳ ದರವು ಪ್ರತಿ ಕಿಲೋಮೀಟರ್‌ಗೆ 1 ಪೈಸೆ ಹೆಚ್ಚಾಗಲಿದೆ. AC...

ತುಳು ನಾಟಕ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮ.. 

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ...

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮನವಿ ಸಲ್ಲಿಕೆ..

ಬಂಟ್ವಾಳ : ನಿನ್ನೆ ಗ್ರಾಮ ಪಂಚಾಯತ್ ನಲ್ಲಿ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ನಿವೃತ್ತ ಶಿಕ್ಷಕರು ಮತ್ತು ಬಂಟ್ವಾಳ ಮಂಡಲ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕರು ಶ್ರೀ ವೇದಾನಂದ್...

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ವಿಟ್ಲದಲ್ಲಿ ಬಿಜೆಪಿ ಪ್ರತಿಭಟನೆ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬಿಜೆಪಿಯ ವಿಟ್ಲ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ಬೆಲೆ ಏರಿಕೆ, ಕಟ್ಟಡ ನಿರ್ಮಾಣ ಸಾಮಗ್ರಿಗಳಾದ ಮರಳು ಮತ್ತು ಕೆಂಪುಕಲ್ಲು ಅಭಾವದಿಂದ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ...