Friday, April 5, 2024

ಪಾಣೆಮಂಗಳುರು ಶ್ರೀ ಶಾರದಾ ಪ್ರೌಢ ಶಾಲೆ: 70ನೇ ಸಂವಿಧಾನ ದಿನಾಚರಣೆ

ಬಂಟ್ವಾಳ: ಪಾಣೆಮಂಗಳುರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ 70ನೇ ಸಂವಿಧಾನ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮ ಶನಿವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಚಿಂತಕ ದಮ್ಮಾನಂದ ಬೆಳ್ತಂಗಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವವು ಸಂವಿಧಾನದ ಅಂಗವಾಗಿದೆ. ಅದನ್ನು ಉಳಿಸುವ ಕಾರ್ಯವಾಗಬೇಕಾಗಿದೆ. ದೇಶದ ಏಕತೆ, ಸಾರ್ವಭೌಮ, ಅಖಂಡತೆ ಉಳಿಯಬೇಕಾದರೆ ಸಂವಿಧಾನ ರಕ್ಷಣೆ ಅಗತ್ಯ. ಕೇವಲ ಸಂವಿಧಾನ ದಿನಾಚರಣೆಯನ್ನು ಆಚರಿಸಿದರೆ ಸಾಲದು. ಬದಲಾಗಿ ಸಂವಿಧಾನವನ್ನು ಓದಿ, ಅರ್ಥೈಸುವ ಮೂಲಕ ಅದರ ಆದರ್ಶಗಳನ್ನು ಮೈಗೂಡಿಸಿಕೊಂಡು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ದೇವರಿಗೆ ಮನುಷ್ಯರೆಲ್ಲರೂ ಸಮಾನರು ಎಂದು ಹೇಳುತ್ತಿರುವ ನಾವುಗಳು, ಮನುಷ್ಯ ಮನುಷ್ಯರ ನಡುವಿನ ಅಸಮಾನತೆಯನ್ನು ಉಂಟು ಮಾಡುತ್ತಿದ್ದೇವೆ ಎಂದು ವಿಷಾದಿಸಿದ ಅವರು, ಸಮಾನತೆ, ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ, ಭ್ರಾತೃತ್ವದ ಬಗ್ಗೆ ಮಾಹಿತಿ ನೀಡಿದರು.
ಪಾಣೆಮಂಗಳುರು ಶ್ರೀ ಶಾರದಾ ಪ್ರೌಢ ಶಾಲೆಯ ಸಂಚಾಲಕ ಎಂ.ಜನಾರ್ದನ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಶೀಕ್ಷಕ ಭೋಜ ಕೆ., ಹಿರಿಯ ಶಿಕ್ಷಕರಾದ ಶಿವಪ್ಪನಾಯ್ಕ, ಉಮಾ ಕಿಶೋರಿ, ಶಾಲಾ ನಾಯಕ ಹರ್ಷಿತ್ ಉಪಸ್ಥಿತರಿದ್ದರು. ಶಿಕ್ಷಕ ಧನರಾಜ್ ಡಿ.ಆರ್ ಸ್ವಾಗತಿಸಿದರು. ಶಿಕ್ಷಕ ಶಿವಪ್ಪನಾಯ್ಕ್ ವಂದಿಸಿ, ಶಿಕ್ಷಕ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಅತಿಥಿಗಳಾದ ದಮ್ಮಾನಂದ ಬೆಳ್ತಂಗಡಿ ಅವರು ಮಕ್ಕಳಿಗೆ ಸಂವಿಧಾನ ರಕ್ಷಣಾ ಪ್ರತಿಜ್ಞಾವಿಧಿ ಬೋಧಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...