ಬಂಟ್ವಾಳ: ಬೊಳ್ಳುಕಲ್ಲು ಪೆರಾಜೆ ಶ್ರೀ ದೇವಿ ಭಜನಾ ಮಂದಿರದಲ್ಲಿ ಜ. 8 ರಂದು ಮಂಗಳವಾರ ರಾತ್ರಿ ವಾಸ್ತು ಪೂಜೆ ಮತ್ತು ಜ.9 ರಂದು ಬುಧವಾರ ಬೆಳಿಗ್ಗೆ 8:13 ರ ಮಕರ ಲಗ್ನ ಸುಮೂರ್ತದಲ್ಲಿ ಶ್ರೀ ದೇವಿಗೆ ನೂತನ ದಾರು ಮಂಟಪ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಭಜನಾ ಮಂದರ ಮತ್ತು ಭಜನಾ ಮಂಡಳಿ ಅಧ್ಯಕ್ಷ ಮತ್ತು ಸರ್ವ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.9 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸಂಜೆ 6 ಗಂಟೆಯವರೆಗೆ ಭಜನಾ ಸೇವೆ ನಡೆಯಲಿದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
