Saturday, April 13, 2024

ಪಿಲಾತಬೆಟ್ಟು ವ್ಯ.ಸೇ.ಸ.ಸಂಘ ಚುನಾವಣೆ ಸಹಕಾರ ಭಾರತಿ ಬೆಂಬಲಿತ ಸದಸ್ಯರ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ ಪುಂಜಾಲಕಟ್ಟೆ ಇದರ ಆಡಳಿತ ಮಂಡಳಿಗೆ ಚುನಾವಣೆಯು ಜ.25ರಂದು ಸಂಘದ ಕಚೇರಿ ಕಟ್ಟಡದಲ್ಲಿ ನಡೆಯಿತು.
ಸಹಕಾರ ಭಾರತಿ ಬೆಂಬಲಿತ, ದ.ಕ. ಮತ್ತು ಉಡುಪಿ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮಿ ನಾರಾಯಣ ಉಡುಪ ಮತ್ತು ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರ ನೇತೃತ್ವದ ಸ್ಫರ್ಧಿಗಳು ಜಯಗಳಿಸಿದ್ದು, ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.
ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 26 ಮಂದಿ ಅಭ್ಯರ್ಥಿಗಳು ಸ್ಫರ್ಧಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಸರ್ಧೆ ನಡೆದಿತ್ತು. ಈ ಹಿಂದೆ ಕಳೆದ 30 ವರ್ಷಗಳಿಂದ ನಿರಂತರ ಬಿಜೆಪಿ ಬೆಂಬಲಿತ ಸದಸ್ಯರು ಆಡಳಿತ ನಡೆಸಿದ್ದು, ಈ ಬಾರಿಯೂ ಆಡಳಿತವನ್ನು ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಸಾಮಾನ್ಯ ಸ್ಥಾನದಿಂದ ಬೂಬ ಸಪಲ್ಯ, ಸೀತಾರಾಮ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ನಾರಾಯಣ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಲಕ್ಷ್ಮಿ ನಾರಾಯಣ ಉಡುಪ, ಉಮೇಶ್ ಪೂಜಾರಿ, ಪ್ರಭಾಕರ ಪಿ. ಎಂ., ಮಹಿಳಾ ಸ್ಥಾನದಿಂದ ಹರ್ಷಿಣಿ, ಸರೋಜಾ ಡಿ. ಶೆಟ್ಟಿ, ಪ.ಜಾತಿ ಸ್ಥಾನದಿಂದ ಶಿವಯ್ಯ, ಪ. ಪಂಗಡದಿಂದ ಸುಂದರ ನಾಯ್ಕ, ಸಾಲಗಾರರಲ್ಲದ ಸ್ಥಾನದಿಂದ ದಿನೇಶ್ ಮೂಲ್ಯ ಅವರು ಆಯ್ಕೆಯಾಗಿದ್ದಾರೆ.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧಿಕಾರಿ ಎನ್. ಜೆ. ಗೋಪಾಲ್ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...