ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ ಪುಂಜಾಲಕಟ್ಟೆ ಇದರ ಆಡಳಿತ ಮಂಡಳಿಗೆ ಚುನಾವಣೆಯು ಜ.25ರಂದು ಸಂಘದ ಕಚೇರಿ ಕಟ್ಟಡದಲ್ಲಿ ನಡೆಯಿತು.
ಸಹಕಾರ ಭಾರತಿ ಬೆಂಬಲಿತ, ದ.ಕ. ಮತ್ತು ಉಡುಪಿ ಜಿಲ್ಲಾ ಹಾಪ್ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮಿ ನಾರಾಯಣ ಉಡುಪ ಮತ್ತು ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರ ನೇತೃತ್ವದ ಸ್ಫರ್ಧಿಗಳು ಜಯಗಳಿಸಿದ್ದು, ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.
ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 26 ಮಂದಿ ಅಭ್ಯರ್ಥಿಗಳು ಸ್ಫರ್ಧಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಸರ್ಧೆ ನಡೆದಿತ್ತು. ಈ ಹಿಂದೆ ಕಳೆದ 30 ವರ್ಷಗಳಿಂದ ನಿರಂತರ ಬಿಜೆಪಿ ಬೆಂಬಲಿತ ಸದಸ್ಯರು ಆಡಳಿತ ನಡೆಸಿದ್ದು, ಈ ಬಾರಿಯೂ ಆಡಳಿತವನ್ನು ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಸಾಮಾನ್ಯ ಸ್ಥಾನದಿಂದ ಬೂಬ ಸಪಲ್ಯ, ಸೀತಾರಾಮ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ನಾರಾಯಣ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಲಕ್ಷ್ಮಿ ನಾರಾಯಣ ಉಡುಪ, ಉಮೇಶ್ ಪೂಜಾರಿ, ಪ್ರಭಾಕರ ಪಿ. ಎಂ., ಮಹಿಳಾ ಸ್ಥಾನದಿಂದ ಹರ್ಷಿಣಿ, ಸರೋಜಾ ಡಿ. ಶೆಟ್ಟಿ, ಪ.ಜಾತಿ ಸ್ಥಾನದಿಂದ ಶಿವಯ್ಯ, ಪ. ಪಂಗಡದಿಂದ ಸುಂದರ ನಾಯ್ಕ, ಸಾಲಗಾರರಲ್ಲದ ಸ್ಥಾನದಿಂದ ದಿನೇಶ್ ಮೂಲ್ಯ ಅವರು ಆಯ್ಕೆಯಾಗಿದ್ದಾರೆ.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧಿಕಾರಿ ಎನ್. ಜೆ. ಗೋಪಾಲ್ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.