ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಪ್ರಯುಕ್ತ ವಿಟ್ಲದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮತ್ತು ಭಜನಾ ಉಲ್ಪೆ ಮೆರವಣಿಗೆ ನಡೆಯಿತು.
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಟ್ಲದ ಲಲಿತ ಕಲಾ ಸದನದ ನೃತ್ಯ ನಿರ್ದೇಶಕಿ ವಿದುಷಿ ನಯನಾ ಸತ್ಯನಾರಾಯಣ ಇವರ ಶಿಷ್ಯೆಯರಿಂದ ಭರತನಾಟ್ಯ-ನೃತ್ಯ ವೈಭವ ನಡೆಯಿತು.