Tuesday, April 9, 2024

ಗೋವು ವಧೆ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಸಜೀಪ ನಡುವಿನಲ್ಲಿ ಅಕ್ರಮವಾಗಿ ಗೋವು ವಧೆ ಮಾಡಿ ಮಾರಾಟಕ್ಕೆ ಸಿದ್ದಪಡಿಸುತ್ತಿದ್ದ ವೇಳೆ ದಾಳಿ ನಡೆಸಿ ದ ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಇಬ್ಬರು ಆರೋಪಿಗಳನ್ನು ಬಂಧಿಸಿ, ಪರಾರಿಯಾದ ಒರ್ವ ಆರೋಪಿಯ ಬಂಧನಕ್ಕೆ ಬಲೆಬೀಸಿದ್ದಾರೆ.


ಕಡಬ ಪುತ್ತೂರು ತಾಲೂಕಿನ ಕೋಡಿಂಬಾಳ ಗ್ರಾಮದ ಕೆಂಚಬಟ್ರ ನಿವಾಸಿ ದಿ.ಮಹಮ್ಮದ್ ಅವರ ಪುತ್ರ ಆಸೀಫ್ (31), ಹಾಗೂ ಪುತ್ತೂರು ತಾಲೂಕಿನ ಕೊಂಡಿಬಾಳ ಗ್ರಾಮದ ಪನ್ಯ ಬಾಜಿನಡಿ ನಿವಾಸಿ ಉಮ್ಮರ್ ಅವರ ಪುತ್ರ ಆಸಿರ್ ( 25) ಬಂಧಿತ ಆರೋಪಿ.‌
ಸಜೀಪ ನಡು ಗ್ರಾಮದ ಗೋಳಿಪಡ್ಪು ಎಂಬಲ್ಲಿ ಉಮ್ಮರ್ ಎಂಬವರ ಮನೆಯ ಹಿಂಬದಿಯ ಖಾಲಿ ಜಮೀನಿನಲ್ಲಿ ಮಾರಾಟ ಮಾಡಿ ಹಣ ಮಾಡುವ ಉದ್ದೇಶದಿಂದ ಜಾನುವಾರು ಒಂದನ್ನು ಕಡಿದು ಮಾಂಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಇಂದು ಮದ್ಯಾಹ್ನ ವೇಳೆ ದಾಳಿ ನಡೆಸಿ ದಾಗ ಸ್ಥಳದಲ್ಲಿ ಮೂವರು ಆರೋಪಿಗಳು ಜಾನುವಾರು ಕೊಂದು ಮಾಂಸ ಮಾಡುತ್ತಿದ್ದು ಅದರಲ್ಲಿ ಪೋಲೀಸರನ್ನು ನೋಡಿ ಒರ್ವ ಆರೋಪಿ ಸ್ಥಳೀಯ ಗೋಳಿಪಡ್ಪು ನಿವಾಸಿ ಉಸ್ಮಾನ್ ಅವರ ಮಗ ಹೈದರ್ ( 40) ಸ್ಥಳದಿಂದ ಪರಾರಿಯಾಗಿದ್ದಾನೆ.
ಸುಮಾರು ಏಳು ಸಾವಿರ ರೂ ಮೌಲ್ಯ ದ ಕಡಿದು ಮಾಂಸ ಮಾಡಲು ಸಿದ್ದವಾದ ಜಾನುವಾರು, ಕಡಿದು‌ಮಾಂಸ ಮಾಡಲು ಉಪಯೋಗಿಸಿ ದ ಸಲಕರಣೆಗಳನ್ನು ವಶಪಡಿಸಿಕೊಂಡ ಪೋಲೀಸರು ಆರೋಪಿ ಗಳ ವಿರುದ್ಧ ಕಲಂ.4,5,11 ಕರ್ನಾಟಕ ಗೋವಧೆ ಪ್ರತಿಬಂಧಕ ಕಾಯ್ದೆ ಹಾಗೂ ಕಲಂ.11 ಪ್ರಾಣಿ ಹಿಂಸೆ ತಡೆಕಾಯ್ದೆ 1960 ರಂತೆ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಚರಣೆ ಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸ್ ಸಿಬ್ಬಂದಿ ಗಳಾದ ಜನಾರ್ಧನ, ಸುರೇಶ್, ಜಯರಾಮ, ಸುಬ್ರಹ್ಮಣ್ಯ ಪಾಲ್ಗೊಂಡಿದ್ದರು.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...