Saturday, April 6, 2024

‘ವಾರ್ತಾ ಭಾರತಿ’ ಉಪಸಂಪಾದಕ ಇಮ್ತಿಯಾಝ್‌ ಶಾಗೆ ಪ.ಗೋ. ಪ್ರಶಸ್ತಿ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ.. ವಾರ್ತಾಭಾರತಿ ಕನ್ನಡ ದೈನಿಕದ ಉಪಸಂಪಾದಕ ಇಮ್ತಿಯಾಝ್ ಶಾ ತುಂಬೆ ಆಯ್ಕೆಯಾಗಿದ್ದಾರೆ.

ಇಮ್ತಿಯಾಝ್ ಶಾ ಅವರ ವಿಶೇಷ ವರದಿ ‘ಕೊಡುವ ಕೈಗಳಿಗಾಗಿ ಕಾಯುತ್ತಿರುವ ಕೊಡಗು’ ಆಗಸ್ಟ್ 31, 2018 ರಂದು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು.

ಹಿರಿಯ ಪತ್ರಕರ್ತರಾದ ಸುರೇಂದ್ರ ಶೆಟ್ಟಿ, ರೇಶ್ಮ್ಮಾ ಜಿ. ಉಳ್ಳಾಲ್ ಮತ್ತು ಉಪನ್ಯಾಸಕಿ ಡಾ. ಮೌಲ್ಯ ಜೀವನ್ ನೇತೃತ್ವದ ಆಯ್ಕೆ ಸಮಿತಿಯು ಇಮ್ತಿಯಾಝ್ ಶಾ ಅವರ ವರದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ.

ಪ್ರಶಸ್ತಿ ಪ್ರದಾನ ಸಮಾರಂಭ ಫೆ.27ರಂದು ಬೆಳಗ್ಗೆ 11:00 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ. ದ.ಕ.ಜಿಲ್ಲಾ ವಾರ್ತಾಧಿಕಾರಿ ಕೆ. ರೋಹಿಣಿ ಪ್ರಶಸ್ತಿ ಪ್ರದಾನ ಮಾಡಲಿರುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...