Monday, April 8, 2024

ಸ್ಕೌಟ್ಸ್, ಗೈಡ್ಸ್ ಸಂಸ್ಥೆಗಳ ಕಾರ್ಯ ಶ್ಲಾಘನೀಯ: ಡಾ. ಮಾರ್ಕ್ ಕ್ಯಾಸ್ತೆಲಿನೊ

ಬಂಟ್ವಾಳ: ಗ್ರಾಮೀಣ ಪ್ರದೇಶದಲ್ಲಿ ಜನ ಜಾಗೃತಿ ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳ ಸೇವಾ ಕಾರ್ಯ ಶ್ಘಾಘನೀಯ ಎಂದು ಅಮ್ಟೂರು ಚರ್ಚ್ ಧರ್ಮಗುರು ರೆ.ಫಾ.ಡಾ. ಮಾರ್ಕ್ ಕ್ಯಾಸ್ತೆಲಿನೊ ಅವರು ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಪಾಣೆಮಂಗಳೂರು ವತಿಯಿಂದ ಪಾಣೆಮಂಗಳೂರು ಸುಮಂಗಲ ಕಲ್ಯಾಣ ಮಂಟಪದಲ್ಲಿ ನಡೆದ ಸ್ಥಳೀಯ ಸಂಸ್ಥೆಯ ವಾರ್ಷಿಕ ರ್‍ಯಾಲಿ ಉತ್ಸವ-2018-19 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಪೀಳಿಗೆಯಲ್ಲಿ ರಾಷ್ಟ್ರ ಭಕ್ತಿ ಮೂಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಗಳ ಸೇವಾ ಕಾರ್ಯವನ್ನು ಪ್ರೋತ್ಸಾಹಿಸುವ ಕೆಲಸ ನಡೆಯಬೇಕಿದೆ ಎಂದರು.
ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಅಧ್ಯಕ್ಷ ಎನ್.ಶ್ರೀನಿವಾಸ ಕುಡ್ವ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ತಾ.ಪಂ. ಸದಸ್ಯೆ  ಚಂದ್ರಾವತಿ ನಾಯ್ಕ, ಬಜಾರು ಸಮೂಹ ಸಂಸ್ಥೆಗಳ ಮುಖ್ಯಸ್ಥ ಎಸ್.ಎಂ.ಗೋಪಾಲಕೃಷ್ಣ ಆಚಾರ್ಯ ಮಾರ್ನಬೈಲು, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ಶಿಕ್ಷಣ ಸಮನ್ವಯ ಅಧಿಕಾರಿ ರಾಧಾಕೃಷ್ಣ ಭಟ್.ಕೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಶ್ರೀಮತಿ ರತ್ನಾವತಿ ಉಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ:
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರುಗಳಾದ ರಾಯಪ್ಪಕೋಡಿ ಕೆ.ಕೃಷ್ಣ ಕಾರಂತ ಅಮ್ಟೂರು, ಕೆ.ಎನ್.ಗಂಗಾಧರ್ ಆಳ್ವ ತುಂಬೆ, ಪಿ.ಪಾಂಡುರಂಗ ಪ್ರಭು, ಬಿ.ರಾಮಚಂದ್ರ ರಾವ್, ಡಾ.ಎಂ.ಎಂ.ಶರೀಫ್, ಕೆ.ಕೃಷ್ಣ ಕುಮಾರ್ ಪೂಂಜ, ಕಲ್ಯಾರು ಪದ್ಮನಾಭ ಭಂಡಾರಿ ನರಿಕೊಂಬು, ಡಿ.ಎ.ರಹ್ಮಾನ್ ಪಟೇಲ್ ಬಿ.ಸಿ.ರೋಡ್, ಯಮುನಾ ಅಕ್ಕ ನರಿಕೊಂಬು, ದಾಮೋದರ ಎ.ಸಂಚಯಗಿರಿ, ನಾರಾಯಣ ಸಪಲ್ಯ ನರಿಕೊಂಬು, ಕೃಷ್ಣ ನಾಯ್ಕ ಕೊಪ್ಪಳಕೋಡಿ ನರಿಕೊಂಬು, ಬಿ.ಎಚ್.ಉದಯ ಪೈ ಮೆಲ್ಕಾರ್, ಸುರೇಶ್ ಜಿ, ಶಿವಪ್ಪ ನಾಯ್ಕ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಸ್ಥಳೀಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ. ಜಯಂತ ನಾಯಕ್ ಸ್ವಾಗತಿಸಿ, ಜತೆ ಕಾರ್ಯದರ್ಶಿ  ಸುಧಾ ವಂದಿಸಿದರು. ಸ್ಕೌಟರ್ ರಾಜೇಂದ್ರ ಗೌಡ ಕಾರ್ಯಕ್ರಮ ನಿರೂಪಿಸಿದರು. ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ವಸಂತಿ ಗಂಗಾಧರ ಬೋಳಂಗಡಿ, ಸ್ಕೌಟರ್‌ಗಳಾದ ನೂರುದ್ದೀನ್ ಜಿ.ಎಂ., ಸುರೇಶ್ ಜೆ, ಪ್ರೇಮಚಂದ್ರ ಸಹಕರಿಸಿದರು.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...