Tuesday, April 9, 2024

ಲಾರಿ ಡಿಕ್ಕಿ ಬೈಕ್ ಸಹಸವಾರ ಸಾವು

ಬಂಟ್ವಾಳ: ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಬೀರ ಗಾಯಗೊಂಡು ಸಹಸವಾರ ಮ್ರತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದೇವಸ್ಯಪಡೂರು ಗ್ರಾಮದಲ್ಲಿ ನಡೆದಿದೆ.
ಕಲ್ಲಡ್ಕ ಸಮೀಪದ ಬಿ.ಆರ್.ನಗರ ಬಾಳ್ತಿಲ ನಿವಾಸಿ ಪ್ರಶಾಂತ್ (25) ಮ್ರತಪಟ್ಟ ಯುವಕ .‌
ಬರಿಮಾರ್ ನಿವಾಸಿ ಯೋಗೀಶ್ ಅವರು ಗಂಭೀರ ಗಾಯಗೊಂಡು ಮಂಗಳೂರು ವೆನ್ ಲಾಕ್ ಆಸ್ಪತ್ರೆ ಗೆ ದಾಖಲಾದ ಘಟನೆ ನಡೆದಿದೆ.
ಇವರಿಬ್ಬರೂ ಮೇಸ್ತ್ರಿ ಕೆಲಸ ಮಾಡುವವರಾಗಿದ್ದು ದೇವಸ್ಯಪಡೂರು ಎಂಬಲ್ಲಿ ಕೆಲಸದ ವಿಚಾರವಾಗಿ ಮಾತನಾಡಲು ಹೋಗುತ್ತಿದ್ದ ವೇಳೆ ಪಾಣತ್ತಬೈಲು ಎಂಬಲ್ಲಿ ಅತೀ ವೇಗವಾಗಿ ರಾಂಗ್ ಸೈಡ್ ನಲ್ಲಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಹಸವಾರ ಸ್ಥಳದಲ್ಲಿ ಮ್ರತಪಟ್ಟರೆ ಸವಾರ ಗಂಭೀರ ಪ್ರಮಾಣದ ಗಾಯಗಳಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮಂಜುಳಾ, ಎ.ಎಸ್.ಐ. ಕುಟ್ಟಿ ಹಾಗೂ ಸಿಬ್ಬಂದಿ ಗಳು ಬೇಟಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...