Wednesday, April 17, 2024

ಕಾವಳಮೂಡೂರು ಶ್ರೀ ರಾಜನ್‌ದೈವ ಕೊಡಮಣಿತ್ತಾಯಿ ದೈವಸ್ಥಾನ ಮಾ.19-22 : ವಾರ್ಷಿಕ ಜಾತ್ರೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾವಳಮಾಗಣೆ ಶ್ರೀ ರಾಜನ್‌ದೈವ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಮಾ.19ರಿಂದ ಮಾ.22ರವರೆಗೆ ಜರಗಲಿದೆ.
ಮಾ.19ರಂದು ಬೆಳಗ್ಗೆ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ, ಸಂಜೆ ಬಲ್ಲೋಡಿ ಮಾಗಣೆ ಗುತ್ತಿನಿಂದ ಶ್ರೀ ಕೊಡಮಣಿತ್ತಾಯಿ ದೈವದ ಭಂಡಾರ ಹೊರಟು ಕಾವಳಕಟ್ಟೆ ದೈವಸ್ಥಾನಕ್ಕೆ ಆಗಮನ, ರಾತ್ರಿ ಧ್ವಜಾರೋಹಣ, ಚೆಂಡು ಹಾಕುವುದು, ಬಲಿ ಉತ್ಸವ, ದೈವ ದರ್ಶನ, ಮಾ.20ರಂದು ಸಂಜೆ ಬಲಿ ಉತ್ಸವ, ದೈವ ದರ್ಶನ, ಮಾ.21ರಂದು ಬೆಳಗ್ಗೆ ಗಣಪತಿ ಹೋಮ, ಸಂಜೆ ಹೂವಿನ ಪೂಜೆ ಆರಂಭ, ಇತರ ಸೇವೆಗಳು-ಅಂಕ ಅಂಬೋಡಿ, ಮುಂಡೇವು, ಸೂಟೆದಾರ, ಕಾವಳಕಟ್ಟೆ ಬಸದಿಯಲ್ಲಿ ಪಂಚಾಮೃತಾಭಿಷೇಕ, ರಾತ್ರಿ ಅನ್ನಸಂತರ್ಪಣೆ, ಶ್ರೀ ರಾಜನ್ ದೈವ ಕೊಡಮಣಿತ್ತಾಯ ದೈವದ ನೇಮೋತ್ಸವ, ಬಲಿ ಉತ್ಸವ, ದರಿ ದೀಪೋತ್ಸವ, ಹುಲಿಬಂಡಿ ಉತ್ಸವ, ಕುದುರೆ ಬಂಡಿ ಉತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯರಿಂದ ಡಬಲ್ ಗೇಮ್ ತುಳುನಾಟಕ ಪ್ರದರ್ಶನವಿದೆ. ಮಾ.೨೨ರಂದು ಬೆಳಗ್ಗೆ ಧ್ವಜಾವರೋಹಣ, ಕುರುತಂಬಿಲ ನೇಮ, ಶ್ರೀ ಕ್ಷೇತ್ರದಿಂದ ಶ್ರೀ ಕೊಡಮಣಿತ್ತಾಯಿ ದೈವದ ಭಂಡಾರ ಬಲ್ಲೋಡಿ ಮಾಗಣೆ ಗುತ್ತಿಗೆ ನಿರ್ಗಮನ ನಡೆಯಲಿದೆ ಎಂದು ಆನುವಂಶಿಕ ಆಡಳಿತ ಮೊಕ್ತೇಸರ ಬಿ.ಭರತ್ ಕುಮಾರ್ ಜೈನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...