ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ನರಿಕೊಂಬು ನವಜೀವನ ಅಂಗನವಾಡಿ ಕೇಂದ್ರದಲ್ಲಿ ರೋಟರಿ ತಾಯಿ – ಮಗುವಿನ ಆರೋಗ್ಯ ಮಾಸಾಚರಣೆ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ರೋಟರಿ ಜಿಲ್ಲೆ 3181ಇದರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ ದೀಪ ಬೆಳಗಿಸಿ ಉದ್ಘಾಟಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನವಜೀವನ ಅಂಗನವಾಡಿ ವ್ಯಾಪ್ತಿಯ ಕಿಶೋರಿಯರಿಗೆ ಸ್ಯಾನಿಟರಿ ನ್ಯಾಪ್ ಕಿನ್ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ರೋಟರಿ ವಲಯ 4ರ ನಿಯೋಜಿತ ಅಸಿಸ್ಟೆಂಟ್ ಗವರ್ನರ್ ರಿತೇಶ್ ಬಾಳಿಗ ,ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಪದಾಧಿಕಾರಿಗಳಾದ ಜಯರಾಜ್ ಬಂಗೇರ, ಪಲ್ಲವಿ ಕಾರಂತ್, ಆಶಾಮಣಿ ರೈ, ವಿಂಧ್ಯಾ ಎಸ್ ರೈ, ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ಉಪಸ್ತಿತರಿದ್ದರು.