Saturday, April 13, 2024

ಇಸ್ರೇಲ್ ಮಾದರಿಯ ತಾಂತ್ರಿಕ ಕೃಷಿಗೆ ದ.ಕ.ಮತ್ತು ಉಡುಪಿ ಜಿಲ್ಲೆಸೂಕ್ತ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ದ.ಕ.ಮತ್ತು ಉಡುಪಿ ಜಿಲ್ಲೆ ಯಲ್ಲಿ ಇಸ್ರೇಲ್ ಮಾದರಿಯ ತಾಂತ್ರಿಕ ಮಾದರಿಯ ಲ್ಲಿ ಕೃಷಿ ಮಾಡಲು ಇಲ್ಲಿನ ಮಣ್ಣು ಸೂಕ್ತವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ‌

ಅವರು ದ.ಕ.ಜಿಲ್ಲಾ ಪಂಚಾಯತ್ ಮಂಗfಳೂರು, ಕೃಷಿ ಇಲಾಖೆ ವತಿಯಿಂದ ವಿವಿಧ ಇಲಾಖೆ ಗಳ ಒಗ್ಗೂಡುವಿಕೆಯೊಂದಿಗೆ ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆದ
ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ 2019-20 ಕಾರ್ಯಕ್ರಮ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮ ವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ
ಮಾತನಾಡಿದರು.

ದ.ಕ.ಜಿಲ್ಕೆಯಲ್ಲಿ ಕೃಷಿ ಸಂಸ್ಕೃತಿಯನ್ನು ನಾವು ಮುಂದಿನ ಜನಾಂಗಕ್ಕೆ ಉಳಿಸಿ ತಿಳಿಸಿಕೊಡದಿದ್ದರೆ, ಮಕ್ಕಳಿಗೆ ಕೃಷಿಯ ಬಗ್ಗೆ ಆಸಕ್ತಿ ತೋರಿಸದಿದ್ದರೆ ಬಂಟ್ವಾಳ ತಾಲೂಕಿನ‌ ಪ್ರತಿಯೊಂದು ಮನೆ ವೃದ್ದಾಶ್ರಮವಾಗುವುದರಲ್ಲಿ ಸಂದೇಹವಿಲ್ಲ ಎಂದು ಅವರು ಹೇಳಿದರು. ಕೃಷಿ ಮಾರುಕಟ್ಟೆಯ ಲ್ಲಿ
ನಾವು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕಾಗಿದೆ ಎಂದರು.

ಗರಂ ಅದ ಶಾಸಕರು:

ಕೃಷಿ ಕರಿಗೆ ಉಪಯೋಗ ವಾಗದ ಕಾರ್ಯಕ್ರಮ ದ ಮೂಲಕ ಇಲಾಖೆ ರೈತರನ್ನು ಮೋಸ ಮಾಡವುದು ಸರಿಯಲ್ಲ ಎಂದು ಅವರು ಹೇಳಿದರು.

ಕೃಷಿ ಇಲಾಖೆ ರೈತರ ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮ ಮಾಡಲು ಹೊರಟಿದೆ ಆದರೆ ಕಾರ್ಯಕ್ರಮ ದ ಆಮಂತ್ರಣ ಪತ್ರದಲ್ಲಿ ಅರ್ಧ ಗಂಟೆಗೊಮ್ಮೆ ಕಾರ್ಯಕ್ರಮ ಗಳ ಟೈಂ ಟೇಬಲ್ ನಮೂದಿ ಮಾಡಿದೆ.
ಇದು ಸಾಧ್ಯನಾ ಎಂದು ಪ್ರಶ್ನಿಸಿದರು.
ಕೇವಲ ವಾಹನ ಮೂಲಕ ಜಾಥ ಮಾಡುವುದಾ ಅಥವಾ ಕಾರ್ಯಕ್ರಮ ಮಾಡಲಿಕ್ಕೆ ಇದೆಯಾ ಎಂದು ಅವರು ಪ್ರಶ್ನಿಸಿದರು.
ಇಂತಹ ನಾಮಕಾವಸ್ಥೆಯ ಕಾರ್ಯಕ್ರಮ ನೀವು ಮಾಡುವುದೇ ಬೇಡ, ಮತ್ತು ಈ ರೀತಿಯಲ್ಲಿ ರೈತರನ್ನು ಮೋಸಮಾಡುವುದಕ್ಕೆ ನನ್ನ ವಿರೋಧ ವಿದೆ ಎಂದರು.
ಜೊತೆಗೆ ಈ ತಾಲೂಕಿನಲ್ಲಿ ಭತ್ತ, ಅಡಿಕೆ ಹೀಗೆ ಬೇರೆ ಬೇರೆ ಬೆಲೆಗಳ ನ್ನು ಬೆಳೆಯುವ ಬೆಳೆಗಾರರ ಮಾಹಿತಿ ಬೇಕು ಮತ್ತು ಯಾಕೆ ಇಳುವರಿ ಕಡಿಮೆ ರೈತರು ಯಾಕೆ ಕೃಷಿಯಿಂದ ದೂರ ಅಗುತ್ತಿದ್ದಾರೆ ಎಂಬ ಪೂರ್ಣ ಮಾಹಿತಿ ನಿಮ್ಮಲ್ಲಿ ಇದ್ದರೆ ಅದಕ್ಕೆ ಬೇಕಾದ ಕಾರ್ಯಕ್ರಮ ಗಳನ್ನು ಹಾಕಿ ಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಕೇವಲ ಮೈಕ್ ಬಳಸಿ ವಾಹನ ದಲ್ಲಿ ಹೋದರೆ ಯಾವ ಪ್ರಯೋಜನ ವಾಗುವುದಿಲ್ಲ.
ಇಲಾಖೆಯ ಪ್ರತಿಯೊಬ್ಬ ಅಧಿಕಾರಿಗೂ ಜವಬ್ದಾರಿ ಯಿದೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಕೃಷಿಯಿಂದ ದೂರ ಉಳಿಯುತ್ತಿದ್ದಾರೆ.
ಸ್ವಂತ ಜಮೀನಿನಲ್ಲಿ ಕೃಷಿ ಬೆಳೆದು ಇದಕ್ಕೆ ಸೂಕ್ತವಾದ ಬೆಲೆ ಸಿಗುವಂತೆ ಮಾಡಲು ಹಾಗೂ ಯಾಂತ್ರೀಕೃತ ಕೃಷಿಗೆ ಪೂರಕವಾದ ಕಾರ್ಯಕ್ರಮ ಸರಕಾರ ಕೈಗೊಂಡಿದೆ, ಇದಕ್ಕೆ ಕೃಷಿಕರು ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದರು.

ವೇದಿಕೆಯಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ. ಇಬ್ರಾಹಿಂ, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ,

ಬಂಟ್ವಾಳ ಎ.ಪಿ.ಎಂ.ಸಿ.ಅಧ್ಯಕ್ಷ ಪದ್ಮನಾಭ ರೈ,
ಬಂಟ್ವಾಳ ಕೃಷಿ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಬರಿಮಾರು.ತಾ.ಪಂ.ಸದಸ್ಯ ಪ್ರಭಾಕರ ಪ್ರಭು,

ತಾ.ಪಂ.ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ,

ಬಂಟ್ವಾಳ ಹೋಬಳಿ, ಪಾಣೆಮಂಗಳೂರು ಹೋಬಳಿ ಮತ್ತು ವಿಟ್ಲ ಹೋಬಳಿ ಮೂರು ವಿಭಾಗದಲ್ಲಿ
ಜೂನ್ 24 ರಿಂದ ಜುಲೈ 3 ರ ವರೆಗೆ ಪ್ರತಿ ಗ್ರಾಮದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮ ದ ಪ್ರಯೋಜನ ಪಡೆಯುವಂತೆ ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಅವರು ತಿಳಿಸಿದರು.
ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದ ರು.
ಬಂಟ್ವಾಳ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ನಂದನ್ ಶೆಣೈ ಸ್ವಾಗತಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...