Thursday, September 28, 2023

ತಂದೆ, ಮಗಳ ಸಾವಿನಿಂದ ಪಿಲಿಮೊಗರು ಗ್ರಾಮದಲ್ಲಿ ನೀರವ ಮೌನ

Must read

ಬಂಟ್ವಾಳ: ಗಾಳಿ ಮಳೆಯಿಂದ  ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ಸಾವನ್ನಪ್ಪಿದ್ದ ಬಂಟ್ವಾಳ ತಾಲೂಕಿನ ವಾಮದಪದವು  ಸಮೀಪದ ಪಿಲಿಮೊಗರು  ಬಾರೆಕ್ಕಿನಡಿಯಲ್ಲಿ ತಂದೆ, ಮಗಳ ಅಂತಿಮ ಸಂಸ್ಕಾರ ಬುಧವಾರ ಸಂಜೆ  ಬಾರೆಕ್ಕಿನಡಿಯಲ್ಲಿ ನಡೆಯಿತು. ಈ ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.
                 
ಮಂಗಳವಾರ ಸಂಜೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ಗೋಪಾಲಕೃಷ್ಣ  ಶೆಟ್ಟಿ  ಅವರು ತೋಟದಲ್ಲಿ ಕಡಿದು ಬಿದ್ದಿದ್ದ ಹಳೆಯ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ತಂದೆಯನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ಪುತ್ರಿ ದಿವ್ಯಶ್ರೀ ಅವರಿಗೂ ವಿದ್ಯುತ್ ತಂತಿ ತಗಲಿ ಅವರೂ ಮೃತ ಪಟ್ಟಿದ್ದರು.
ಬುಧವಾರ ಮೃತರ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ  ಮರಣೋತ್ತರ ಪರೀಕ್ಷೆಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಮನೆಯಲ್ಲಿ ವಿಧಿ ವಿಧಾನಗಳು ಪೂರೈಸಿದ ಬಳಿಕ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.  ಈ ಸಂದರ್ಭ ಇಡೀ       ಗ್ರಾಮವೇ ಸೇರಿತ್ತು.
ಘಟನೆಯಿಂದ ಆಘಾತಕ್ಕೊಳಗಾಗಿದ್ದ  ಗೋಪಾಲಕೃಷ್ಣ ಶೆಟ್ಟಿ ಅವರ ಪತ್ನಿ ಗಿರಿಜಾ ಶೆಟ್ಟಿ ಅವರನ್ನು ಪತಿ, ಪುತ್ರಿಯ ಅಂತ್ಯ ಸಂಸ್ಕಾರದ ಹಿನ್ನೆಲೆಯಲ್ಲಿ ಮನೆಗೆ ಕರೆತರಲಾಗಿದೆ.

ಅಂತ್ಯ ಸಂಸ್ಕಾರದ ವೇಳೆ ಮೆಸ್ಕಾಂನ  ಅಧಿಕಾರಿಗಳ ಸಹಿತ ಹಲವಾರು ಗಣ್ಯರು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು.    ಅಂತಿಮ ನಮನ: ಸಂಸದ ನಳಿನ್ ಕುಮಾರ್ ಕಟೀಲು , ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾ.ಪಂ.ಸದಸ್ಯೆ ರತ್ನಾವತಿ ಜೆ.ಶೆಟ್ಟಿ, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ,ಜಿ.ಆನಂದ,  ಸುಲೋಚನಾ ಜಿ.ಕೆ.ಭಟ್, ರಾಮದಾಸ ಬಂಟ್ವಾಳ ಹಾಗೂ ಪಕ್ಷದ ಸ್ಥಳೀಯ ಮುಖಂಡರು ಮತ್ತು ಗ್ರಾ.ಪಂ.ಅಧ್ಯಕ್ಷ ಯತೀಶ್ ಶೆಟ್ಟಿ, ಮಾಜಿ ಅಧ್ಯಕ್ಷ  ನವೀನ್‌ಚಂದ್ರ ಶೆಟ್ಟಿ  ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.

ಘಟನೆಯ ಬಗ್ಗೆ ಮೃತರ ಸಂಬಂಧ ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡಿ ಅವರ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ೪೦ ವರ್ಷದಿಂದ ಮೆಸ್ಕಾಂ ವಿದ್ಯುತ್ ಸಂಪರ್ಕದ ತಂತಿಯನ್ನು  ಬದಲಿಸದೆ ನಿರ್ಲಕ್ಷ್ಯ ವಹಿಸಿರುವುದೇ ಈ ಅವಘಡಕ್ಕೆ ಕಾರಣವೆಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

More articles

Latest article