Sunday, April 7, 2024

ಸದಸ್ಯತ್ವದಿಂದ ಬಲಿಷ್ಠ ಸಂಘಟನೆ: ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಭಟ್

ಬಂಟ್ವಾಳ: ಬಿಜೆಪಿ ಸಂಘಟನೆ ಮತ್ತು ಸದಸ್ಯತ್ವ ಅಭಿಯಾನದ ಉದ್ಘಾಟನಾ ಸಭೆ ಇತ್ತೀಚಿಗೆ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಕರಿಂಕ ಎಂಬಲ್ಲಿ ನಡೆಯಿತು. ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಲೋಚನ ಭಟ್ ಅವರು “ಸದಸ್ಯತ್ವ ಜಾಸ್ತಿ ಆದಂತೆ ಸಂಘಟನಾ ಶಕ್ತಿ ಇಮ್ಮಡಿ ಆಗುತ್ತದೆ. ಪಕ್ಷ ಸುದೃಡವಾಗಿ ಬೆಳೆಯತ್ತದೆ.ವ್ಯಕ್ತಿಗಿಂತ ಪಕ್ಷ ಮುಖ್ಯ ಪಕ್ಷಕ್ಕಿತ ದೇಶ ಮುಖ್ಯ ಎಂಬ ಧೋರಣೆಯಂತೆ ವ್ಯಕ್ತಿಗೆ ಪ್ರಾಮುಖ್ಯತೆ ನೀಡದೇ ಪಕ್ಷಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ ಪಕ್ಷ ಸಂಘಟಿಸುವಂತೆ” ಕರೆ ನೀಡಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚೆನ್ನಪ್ಪ ಕೋಟ್ಯಾನ್ ಮಾತಾನಾಡಿ “ಅನಂತಾಡಿಯಲ್ಲಿ ಪಕ್ಷ ಬಲಿಷ್ಟವಾಗಿದೆ,ಸದಸ್ಯತ್ವ ಅಭಿಯಾನವನ್ನು ಮನೆ ಮನೆಗೂ ಪಸರಿಸಿ ಪಕ್ಷವನ್ನು ಇನ್ನಷ್ಟು ಗಟ್ಟಿ ಗೊಳಿಸಲು ಕಾರ್ಯಕರ್ತರು ಶ್ರಮ ವಹಿಸಬೇಕು” ಎಂದರು. ಅಲ್ಲದೇ ಸದಸ್ಯತ್ವ ಅಭಿಯಾನದ ಕುರಿತು ಪೂರ್ಣ ಮಾಹಿತಿ ನೀಡಿದರು.

ಎಸ್ ಸಿ ಮೋರ್ಚದ ಜಿಲ್ಲಾದ್ಯಕ್ಷ ದಿನೇಶ್ ಅಮ್ಟೂರು ಮಾತಾನಾಡಿ”ಕರಿಂಕದ ಈ ದೊಡ್ಡ ಸಭೆ ಮುಂದಿನ ದಿಗ್ವಿಜಯದ ದಿಕ್ಸೂಚಿಯಾಗಿದೆ. ಬಿಜೆಪಿ ಪರಿಸರ ರಕ್ಷಣೆಗೂ ಶಾಂತಿ ಸಾಮರಸ್ಯದ ಆಡಳಿತಕ್ಕೂ ಕಟಿಬದ್ದವಾಗಿದೆ ಎಂದರು.

ಗ್ರಾಮ ಪಂಚಾಯತ್ ಸಮಿತಿ ಅದ್ಯಕ್ಷ ಚಂದ್ರಶೇಖರ್ ಕರ್ಕೇರ ಸಭೆಯ ಅದ್ಯಕ್ಷತೆ ವಹಿಸಿದ್ದು ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್, ಪಂಚಾಯತ್ ಅದ್ಯಕ್ಷ ಸನತ್ ಕುಮಾರ್ ರೈ, ಉಪಾದ್ಯಕ್ಷೆ ಕವಿತಾ ಉಮೇಶ್,ಪಂಚಾಯತ್ ಸದಸ್ಯರಾದ ಪುರಂದರ ಗೌಡ,ವಸಂತಿ ನಾಯ್ಕ್,ಸುಮಿತ್ರ ಕರ್ಕೇರ ಉಪಸ್ಥಿತರಿದ್ದರು.

ಕ್ಷೇತ್ರ ಸಮಿತಿ ಸದಸ್ಯ ನಾಗೇಶ್ ಭಂಡಾರಿ ಕರಿಂಕ ಸ್ವಾಗತಿಸಿ ವಂದಿಸಿದರು.ಬಿಜೆಪಿ ಗ್ರಾಮ ಪಂಚಾಯತ್ ಸಮಿತಿ ಪ್ರಧಾನ ಕಾರ್ಯದರ್ಶಿ ಕಾರ್ಯಕ್ರಮವನ್ನು ನಿರೂಪಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...