Sunday, April 7, 2024

ಮಾಣಿಲ ಕುಕ್ಕಾಜೆ: ಆಟಿದ ಅಂಗಣೊ

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ವಠಾರದಲ್ಲಿ 6ನೇ ವರ್ಷದ ಆಟಿದ ಅಂಗಣೊ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಜಾನಪದೀಯ ಆಟಿ ಕಳೆಂಜನ ಕುಣಿತದ ಬಳಿಕ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶ್ರೀಕೃಷ್ಣ ಗುರೂಜಿ ಉದ್ಘಾಟಿಸಿದರು.
ಬಳಿಕ ತುಳು ಜಾನಪದಕ್ಕೆ ಸಂಬಂಧಿಸಿದ ನಾನಾ ಸ್ಪರ್ಧೆಗಳು ನಡೆದವು. ಮಧ್ಯಾಹ್ನ ಆಟಿ ತಿಂಗಳ ವಿಶೇಷ ತಿಂಡಿ, ತಿನಿಸುಗಳನ್ನೊಳಗೊಂಡ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ತುಳುನಾಡ ಪಾಡ್ದನ ಎಂಬ ವಿಶೇಷ ಕಾರ್ಯಕ್ರಮವು ಕಾಸರಗೋಡು ಕನ್ಯಪ್ಪಾಡಿ ಬೊಳಿಕೆ ಜಾನಪದ ತಂಡದ ಕಲಾವಿದರಿಂದ ಪ್ರದರ್ಶನಗೊಂಡಿತು.
ಸಮಾರೋಪ ಸಮಾರಂಭವನ್ನು ಶ್ರೀ ಶಂಕರ ಸ್ವಾಮಿ ಕೃಪಾ ಕನ್ಯಪ್ಪಾಡಿ ಉದ್ಘಾಟಿಸಿದರು. ಶ್ರೀ ಕ್ಷೇತ್ರದ ಮೊಕ್ತೇಸರ ಎಂ.ಕೆ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರು ಆಶೀರ್ವಚನ ನೀಡಿದರು.
ಗುಡ್ಡಪ್ಪ ಸುವರ್ಣ ಪಂಜ, ಕಿರಣ್ ಉಳ್ಳಾಲ, ಶ್ರೀಧರ ಬಾಳೆಕಲ್ಲು, ಜಯರಾಮ ಕುಲಾಲ್ ಡೆಂಬಲ, ಸಂಕಪ್ಪ ಸುವರ್ಣ ಬಾಡೂರು, ನಳಿನಾಕ್ಷಿ ಕಾಮಜಾಲು ಉಪಸ್ಥಿತರಿದ್ದರು.
ಸ್ಪರ್ಧೆಯ ನಿರ್ಣಾಯಕರಾಗಿ ಐತ್ತಪ್ಪ ಬಾಳೆಕಲ್ಲು, ಸಂಜೀವ ಪಳನೀರು, ಮತ್ತಿತರರು ಸಹಕರಿಸಿದರು. ಸ್ಪರ್ಧಾ ವಿಜೇತರ ವಿವರಣೆಯನ್ನು ಮಹೇಶ್ ಕುಕ್ಕಾಜೆ ವಾಚಿಸಿದರು. ರವಿ ಎಸ್. ಎಂ ಕುಕ್ಕಾಜೆ ಸ್ವಾಗತಿಸಿದರು. ಲಿಖಿತ್ ಅಡ್ಕ ಮಾಣಿಲ ವಂದಿಸಿದರು. ಗಿರೀಶ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

 

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...