Thursday, April 18, 2024

ನಮ್ಮ ಸರಕಾರ ಅಚಲ: ಆರ್.ಆಶೋಕ್

ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಸರಕಾರ ಯಶಸ್ವಿ ರೀತಿಯಲ್ಲಿ ನಿಭಾಯಿಸಿದ್ದು, ಸುಮಾರು ೨೫೦ ಕೋ.ರೂ.ಗಳಲ್ಲಿ ಪ್ರತಿ ಸಂತ್ರಸ್ಥ ಕುಟುಂಬಗಳಿಗೆ ೧೦ ಸಾವಿರ ರೂ.ಗಳ ತತ್‌ಕ್ಷಣದ ಪರಿಹಾರ ನೀಡಿದೆ. ಮನೆ ಕಳೆದುಕೊಂಡವರಿಗೆ ೫ ಲಕ್ಷ ರೂ. ಪರಿಹಾರ ಘೋಷಿಸಿ, ಈಗಾಗಲೇ ೫೦ ಶೇ.ಕ್ಕೂ ಅಧಿಕ ಮಂದಿಗೆ ೧ ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಜತೆಗೆ ಮಧ್ಯವರ್ತಿಗಳ ಕಾಟ ತಪ್ಪಿಸಲು ಪರಿಹಾರ ಧನವನ್ನು ಚೆಕ್ಕಿನ ಬದಲು ಆರ್‌ಟಿಜಿಎಸ್ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ದ.ಕ.ಜಿಲ್ಲೆಯ ಪ್ರವಾಹ ಸಂತ್ರಸ್ಥರ ನೆರವಿಗಾಗಿ ಈಗಾಗಲೇ ೩೫ ಕೋ.ರೂ.ಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಅಶೋಕ್ ಹೇಳಿದರು.

ನಮ್ಮ ಸರಕಾರ ಅಚಲವಾಗಿದ್ದು, ಛಲದಿಂದ ಮುಂದಿನ ಮೂರುವರೇ ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸರಕಾರ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ಸಚಿವ ಆರ್.ಆಶೋಕ್ ಹೇಳಿದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...