Wednesday, April 10, 2024

ಫ್ಲಾಸ್ಟಿಕ್ ನಿಷೇಧ ಅರಿವು ಕಾರ್ಯಕ್ರಮ

ಬಂಟ್ವಾಳ: ಸರಕಾರದ ಆದೇಶವಿದೆ ಎಂದು ಪುರಸಭೆಯು ಪ್ಲಾಸ್ಟಿಕ್ ಕೈ ಚೀಲಗಳನ್ನು ಬ್ಯಾನ್ ಮಾಡುತ್ತಿದ್ದು, ಅದರ ಬದಲಾಗಿ ವ್ಯಾಪಾರಿಗಳು ಪರ್ಯಾಯವಾಗಿ ಯಾವುದನ್ನು ಉಪಯೋಗಿಸಲಿ ಎಂಬುದನ್ನು ಕೂಡ ತಿಳಿಸಬೇಕು ಎಂದು ಪುರಸಭಾ ವ್ಯಾಪ್ತಿಯ ವ್ಯಾಪಾರಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿದರು.
ಬಂಟ್ವಾಳ ಪುರಸಭೆಯು ಸೋಮವಾರ ಬಿ.ಸಿ.ರೋಡಿನಲ್ಲಿರುವ ಲಯನ್ಸ್ ಭವನದಲ್ಲಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಫ್ಲಾಸ್ಟಿಕ್ ನಿಷೇಧದ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸರಕಾರದ ಆದೇಶವನ್ನು ಜಾರಿಗೆ ತರುವ ಕುರಿತು ಪುರಸಭಾ ಅಧಿಕಾರಿಗಳು ತಿಳಿಸಿದಾಗ, ಅಧಿಕಾರಿಗಳ ವಿರುದ್ಧ ಏಕಾಏಕಿ ಆಕ್ರೋಶ ವ್ಯಕ್ತಪಡಿಸಿದರು.


ಫ್ಲಾಸ್ಟಿಕ್ ನೀಡುವ ವ್ಯಾಪಾರಿಗಳಿಗೆ ಬದಲು ಅದನ್ನು ಉಪಯೋಗಿಸುವವರ ವಿರುದ್ಧವೂ ಕ್ರಮಕೈಗೊಳ್ಳಿ ಎಂದು ವ್ಯಾಪಾರಿಗಳು ಸಲಹೆ ನೀಡಿದಾಗ, ಪುರಸಭಾ ಎಂಜಿನಿಯರ್ ಯಾಸ್ಮಿನ್ ಸುಲ್ತಾನ ಅವರು ಇಬ್ಬರ ವಿರುದ್ಧವೂ ಕ್ರಮಕೈಗೊಳ್ಳುತ್ತೇನೆ ಎಂದರು. ನಮ್ಮ ಗ್ರಾಹಕರು ಕೇಳಿದಾಗ ಇಲ್ಲ ಎನ್ನಲು ಆಗುವುದಿಲ್ಲ, ಅವರಲ್ಲಿ ನಿರ್ದಾಕ್ಷಿಣ್ಯವಾಗಿ ಮಾತನಾಡಿದರೆ ನಾವು ವ್ಯಾಪಾರವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದರು.
ಪುರಸಭಾ ವ್ಯಾಪ್ತಿಯಲ್ಲಿ ಕಸದ ಬುಟ್ಟಿಗಳನ್ನು ತೆಗೆದಿರುವುದರಿಂದ ಪ್ಲಾಸ್ಟಿಕ್ ಸಮಸ್ಯೆ ಸೃಷ್ಟಿಯಾಗಿದೆ. ಹೀಗಾಗಿ ಮತ್ತೆ ಕಸದ ಬುಟ್ಟಿಗಳನ್ನು ಅಳವಡಿಸಿದರೆ ಸಮಸ್ಯೆ ಹತೋಟಿಗೆ ಬರುತ್ತದೆ ಎಂದು ವ್ಯಾಪಾರಿಗಳು ಸಲಹೆ ನೀಡಿದಾಗ, ಪುರಸಭಾ ಕಂದಾಯಾಧಿಕಾರಿ ಶಿವ ನಾಯ್ಕ ಅವರು ಕಸದ ಬುಟ್ಟಿಗಳನ್ನು ಅಳವಡಿಸದಂತೆ ಸರಕಾರದ ಆದೇಶದ ಕುರಿತು ಸ್ಪಷ್ಟಪಡಿಸಿದರು.
ಕಸ ವಿಲೇವಾರಿ ಸಮರ್ಪಕವಾಗಿ ಆಗದೇ ಇರುವ ಕುರಿತು ಕೂಡ ಆಕ್ರೋಶಗಳು ಕೇಳಿಬಂತು. ದಂಡ ವಿಧಿಸುವುದಾದರೆ ಎಲ್ಲರ ವಿರುದ್ಧವೂ ವಿಧಿಸಬೇಕು. ಒಂದೆರಡು ವ್ಯಾಪಾರಿಗಳಿಗೆ ಮಾತ್ರ ಅಲ್ಲ. ಜತೆಗೆ ಪ್ಲಾಸ್ಟಿಕ್ ಪುನರ್ ಬಳಕೆಯ ಘಟನೆಗಳನ್ನು ಆರಂಭಿಸುವಂತೆ ಸಲಹೆ ನೀಡಿದರು.
ಪ್ಲಾಸ್ಟಿಕ್ ದುಷ್ಪರಿಣಾಮದ ಕುರಿತು ಪರಿಸರವಾದಿ ಪ್ರೋ| ರಾಜಮಣಿ ರಾಮಕುಂಜ ಅವರು ಮಾತನಾಡಿ, ಪ್ಲಾಸ್ಟಿಕ್ ಬೇಕೋ-ಬೇಡವೋ ಸಂದಿಗ್ದ ಕಾಲಘಟ್ಟವಿದ್ದು, ಅದರ ದುಷ್ಪರಿಣಾಮದ ಕುರಿತು ಎಲ್ಲರೂ ಅರಿತುಕೊಳ್ಳಬೇಕಿದೆ. ಒಮ್ಮೆ ಪ್ಲಾಸ್ಟಿಕ್‌ನ ಅಂಶಗಳನ್ನು ನಮ್ಮ ದೇಹವನ್ನು ಸೇರಿಕೊಂಡರೆ ಮತ್ತೆ ಅದು ಹೊರಗೆ ಹೋಗುವುದಿಲ್ಲ. ಕ್ಯಾನ್ಸರ್ ಖಾಯಿಲೆಗೆ 75 ಶೇ. ಪ್ಲಾಸ್ಟಿಕ್ ಅಂಶಗಳೇ ಕಾರಣವಾಗಿದೆ ಎಂದರು.
ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಮೆಲ್ಕಾರ್, ವೈದ್ಯ ಡಾ| ವಸಂತ ಬಾಳಿಗಾ, ವರ್ತಕರ ಪ್ರತಿನಿಧಿ ಶ್ರೀನಿವಾಸ ಬಾಳಿಗಾ, ದಾಮೋದರ ಬಿ.ಎಂ., ಪುರಸಭಾ ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಉಪಸ್ಥಿತರಿದ್ದರು. ಪುರಸಭೆಯ ಸಿಬಂದಿ ಉಮಾವತಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...