Wednesday, April 10, 2024

ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟು: ಬಂಟ್ವಾಳದಲ್ಲಿ ಎಡಪಕ್ಷಗಳ ಅಖಿಲ ಭಾರತ ಪ್ರತಿಭಟನೆ

ಬಂಟ್ವಾಳ: ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಸಂಕಷ್ಟಗಳ ವಿರುದ್ಧ ಸಿಪಿಐ ಹಾಗೂ ಸಿಪಿಐಎಂ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಎಡಪಕ್ಷಗಳ ಅಖಿಲ ಭಾರತ ಪ್ರತಿಭಟನೆ ಮಂಗಳವಾರ ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ನಡೆಯಿತು.
ಡಿವೈಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರತಿಭಟನಾ ನಿರತನ್ನುದ್ದೇಶಿಸಿ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ದೊಡ್ಡ ಪ್ರಮಾಣದ ಕೈಗಾರಿಕೆಯಿಂದ ಹಿಡಿದು ಸಣ್ಣಗುಡಿ ಕೈಗಾರಿಕೆಗಳು ಕೂಡಾ ಮುಚ್ಚಿ ಹೋಗುತ್ತಿವೆ. ವಿವಿಧ ಕ್ಷೇತ್ರದಲ್ಲಿ ಜನರು ಉದ್ಯೋಗ ಕಳೆದುಕೊಂಡು ಸಂಕಷ್ಟದ ಬದುಕು ಎದುರಿಸುತ್ತಿದ್ದು, ಇನ್ನು ಕೆಲವರು ಬೀದಿ ಬಂದಿದ್ದಾರೆ. ದಿನೇ ದಿನೇ ವ್ಯಾಪಾರ ವಹಿವಾಟಿಲ್ಲದೆ ಆತ್ಮಹತ್ಯೆಯಂತಹ ದಾರಿ ಹಿಡಿದಿದ್ದು, ಈ ದೇಶದಲ್ಲಿ ಬದುಕುವುದೇ ಒಂದು ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕುದುರೆಮುಖ ಮತ್ತು ಎಂಆರ್‌ಪಿಎಲ್ ಕಾರ್ಖಾನೆಗಳು ವಿಸ್ತರಣೆಯಾಗುತ್ತಿವೆ. ಆದರೆ, ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಆಗಲಿ, ಉಳಿದ ಶಾಸಕರಾಗಲಿ ಇಲ್ಲಿನ ಜನತೆಗೆ ಉದ್ಯೋಗ ದೊರಕಿಸಿಕೊಡಲು ಸಾಧ್ಯವಾಗಿಲ್ಲ. ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದೇ ಉತ್ತರ ಭಾರತದ ಜನತೆಗೆ ಕೊಡುತ್ತಿರುವುದರಿಂದ ಮತ್ತಷ್ಟು ನಿರುದ್ಯೋಗ ಸಮಸ್ಯೆ ಎದುರಾಗಿದೆ ಎಂದು ಆರೋಪಿಸಿದರು.
ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಬಿ.ಶೇಖರ್ ಪ್ರಸ್ತಾವಿಸಿ ಮಾತನಾಡಿ, ದೇಶದಲ್ಲಿನ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಶನ್, ಫಾರ್ವರ್ಡ್ ಬ್ಲಾಕ್ ಹಾಗೂ ಆರ್‌ಎಸ್‌ಪಿ ಎಡಪಕ್ಷಗಳ ವತಿಯಿಂದ ದೇಶಾದ್ಯಂತ ಪ್ರತಿಭಟನಾ ಸಭೆಗಳು ನಡೆಯುತಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಪ್ರಮುಖರಾದ ಉದಯ ಕುಮಾರ್, ಸಂಜೀವ ಬಂಗೇರ, ವಾಸುಗಟ್ಟಿ, ಬಾಬು ಭಂಡಾರಿ, ಭಾರತಿ ಶಂಭೂರು, ಸರಸ್ವತಿ ಕಡೇಶಿವಾಲಯ, ಪಿ.ವಿಠಲ ಬಂಗೇರ, ಸುಧಾಕರ ಹಾಜರಿದ್ದರು.
ಸಿಪಿಐ(ಎಂ) ಬಂಟ್ವಾಳ ತಾಲೂಕು ಸಮಿತಿ ಕಾರ್ಯದರ್ಶಿ ರಾಮಣ್ಣ ವಿಟ್ಲ ವಂದಿಸಿದರು. ಮುಖಂಡ ಸುರೇಶ್ ಕುಮಾರ್ ನಿರೂಪಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...