ಬಂಟ್ವಾಳ : ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿ ಸುಧಾಕರ ಎಂಬವರ ಮನೆಗೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು ಮನೆಯ ವಿದ್ಯುತ್ ಮೀಟರ್ ಸುಟ್ಟುಹೋಗಿದೆ ಹಾಗೂ ಮನೆಗೆ ಭಾಗಶಃ ಹಾನಿಯಾಗಿದೆ. ಮನೆಯಲ್ಲಿ ಮಲಗಿದ್ದ ಮನೆಯ ಯಜಮಾನ ಸುಧಾಕರ್ರವರು ಮಿಂಚಿಗೆ ಮನೆಯಿಂದ ಹೊರಗೆ ಓಡಿ ಬಂದಿದ್ದರು. ಆದುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.