ಬಂಟ್ವಾಳ: ಪಾದಚಾರಿಗೆ ಸರಕಾರಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಸರಕಾರಿ ಆಸ್ಪತ್ರೆ ಗೆ ದಾಖಲಾದ ಘಟನೆ ಕಲ್ಲಡ್ಕ ದಲ್ಲಿ ನಡೆದಿದೆ.
ಮಾಣಿ ಸಮೀಪದ ಬುಡೋಳಿ ನಿವಾಸಿ ಅಣ್ಣಿಪೂಜಾರಿ (65) ಅವರಿಗೆ ಬಸ್ ಡಿಕ್ಕಿಯಾಗಿದೆ.
ಕಲ್ಲಡ್ಕ ರಸ್ತೆ ಬದಿಯಲ್ಲಿ ನಿಂತಿದ್ದಾಗ ಸರಕಾರಿ ಬಸ್ ಡಿಕ್ಕಿಯಾಗಿದೆ.
ಘಟನೆ ಯಲ್ಲಿ ಅಣ್ಣಿ ಪೂಜಾರಿ ಅವರಿಗೆ ಗಂಭೀರ ಗಾಯಗಳಾಗಿದೆ, ಕೂಡಲೇ ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.