Friday, April 5, 2024

ಚಂದಳಿಕೆ: ರಾಜ್ಯಮಟ್ಟದ ಪ್ರೋ ಮಾದರಿ ಕಬಡ್ಡಿ ಉದ್ಘಾಟನೆ

ವಿಟ್ಲ: ಚಂದಳಿಕೆ ಯುವಕೇಸರಿ ಅಬೀರಿ ಅತಿಕಾರಬೈಲು ಆಶ್ರಯದಲ್ಲಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದಲ್ಲಿ ೫ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಪ್ರೋ ಮಾದರಿಯ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ ಭಾನುವಾರ ಚಂದಳಿಕೆ ಸರಕಾರಿ ಶಾಲೆಯಲ್ಲಿ ನಡೆಯಿತು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರು ಯುವಕರಲ್ಲಿ ಇಚ್ಛಾಶಕ್ತಿ ಇದ್ದಾಗ ದೇಶದ ಅಭಿವೃದ್ಧಿ ಸಾಧ್ಯ. ಗಾಂಧೀಜಿಯ ಕನಸು ನನಸಾಗಬಹುದು. ಯುವ ಕೇಸರಿಯ ಸೇವಾ ಕಾರ್ಯಗಳು ಎಲ್ಲರಿಗೂ ಪ್ರೇರಣೆಯಾಗಿದೆ. ಕಬಡ್ಡಿ ಆಟದ ಮೂಲಕ ದೇಶದ ಗ್ರಾಮೀಣ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುತ್ತಿದ್ದಾರೆ ಎಂದರು.

ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಕುಂಡಡ್ಕ ನೂಜಿ ಮನೆತನದ ಗುರಿಕ್ಕಾರ ಕೆ.ಟಿ ವೆಂಕಟೇಶ್ವರ ನೂಜಿ ಮಾತನಾಡಿ ಯುವಕರು ತಮ್ಮ ಸಂಪಾದನೆಯ ಹಣದಿಂದ ಬಡವರ ಸೇವೆ ಮಾಡುತ್ತಿರುವುದು ಶ್ಲಾಘನೀಯ. ಬಡವರ ಸೇವೆ ಶ್ರೇಷ್ಠ ಕಾರ್ಯವಾಗಿದೆ ಎಂದರು.

ಬೆಳಗ್ಗೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಯಮಿ ರಾಧಾಕೃಷ್ಣ ನಾಯಕ್ ಅವರು ಟ್ರೋಫಿ ಅನಾವರಣಗೊಳಿಸಿದರು. ಬಳಿಕ ವಿಟ್ಲ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಟ್ರೋಫಿಯನ್ನು ಕ್ರೀಡಾಂಗಣಕ್ಕೆ ತರಲಾಯಿತು. ಸಭಾ ಕಾರ್ಯಕ್ರಮದಲ್ಲಿ ಚಂದಳಿಕೆ ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಕುಳಾಲು ಹಾಗೂ ಹಿರಿಯ ದೈವಾರಾಧಕ ಯಾದವ ಮಡಿವಾಳ ಅಬೀರಿ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿ ಸುಭಾಶ್ಚಂದ್ರ ನಾಯಕ್ ಅವರು ದತ್ತಿ ನಿಧಿ ವಿತರಿಸಿದರು. ಯುವಕೇಸರಿ ಅಬೀರಿ ಅತಿಕಾರಬೈಲು ಅಧ್ಯಕ್ಷ ದಿವಾಕರ ಶೆಟ್ಟಿ ಅಬೀರಿ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಹಿಳೆಯರ ಹಾಗೂ ಮಕ್ಕಳ, ಪುರುಷರ ಕಬಡ್ಡಿ ಪಂದ್ಯಾಟ ನಡೆಯಿತು.

ಈ ಸಂದರ್ಭ ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಭಾರತ ಶಾಮಿಯಾನದ ಮಾಲಕ ಸಂಜೀವ ಪೂಜಾರಿ, ಗೌಡ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ ಮೋಹನ ಗೌಡ ಕಾಯಾರ್‌ಮಾರ್, ಮನೋಜ್ ಕುಮಾರ್ ಡೆಪ್ಪಿನಿ, ಚಲನಚಿತ್ರ ನಟ ಸುರೇಶ್ ಮಾಮೇಶ್ವರ, ಧ್ವನಿ ಮತ್ತು ಬೆಳಕು ಒಕ್ಕೂಟದ ಜಿಲ್ಲಾಧ್ಯಕ್ಷ ರಾಜಶೇಖರ ಕುಡ್ತಮುಗೇರು, ಯೋಗೀಶ ಕೇಪುಳಗುಡ್ಡೆ, ಗಂಗಾಧರ ನಿಡ್ಯ, ಈಶ್ವರ ಬಂಗೇರ ಅಬೀರಿ , ದಯಾನಂದ ಶೆಟ್ಟಿ ಉಜಿರೆಮಾರ್ ಉಪಸ್ಥಿತರಿದ್ದರು.
ಯುವಕೇಸರಿ ಅಬೀರಿ ಅತಿಕಾರಬೈಲು ಪ್ರಧಾನ ಸಂಚಾಲಕ ಪದ್ಮನಾಭ ಶೆಟ್ಟಿ ಚಪುಡಿಯಡ್ಕ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಸುಶಾಂತ್ ಸಾಲಿಯಾನ್ ಚಂದಳಿಕೆ ವಂದಿಸಿದರು. ವಿಠಲ ಅತಿಕಾರಬೈಲು ಕಾರ್ಯಕ್ರಮ ನಿರೂಪಿಸಿದರು. ಗಣೇಶ ಪ್ರಾರ್ಥಿಸಿದರು. ವಿನೀತ್ ಅಬೀರಿ ಸನ್ಮಾನಿತರ ಪರಿಚಯ ಮಾಡಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...