Wednesday, October 18, 2023

ಡಿ.8: ಪಾಂಗಲ್ಪಾಡಿಯಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Must read

ಬಂಟ್ವಾಳ : ಬಂಟ್ವಾಳ ತಾಲೂಕು ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಡಿ.8ರಂದು ಸಂಜೆ 3.30ಕ್ಕೆ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀ ಸತ್ಯನಾರಾಯಣ ಸಭಾ ಭವನದಲ್ಲಿ ಜರಗಲಿದೆ.
ಉದ್ಯಮಿ ಡಾ. ವರದರಾಜ ಪೈ ವಾಮದಪದವು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಪಾಂಗಲ್ಪಾಡಿ ಶ್ರೀ ಕಷ್ಣ ಜನ್ಮಾಷ್ಟಮಿ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣ ಉಡುಪ ಅಧ್ಯಕ್ಷತೆ ವಹಿಸಲಿರುವರು. ಪ್ರತೀ ರವಿವಾರ ಸಂಜೆ ಗಂಟೆ 4 ರಿಂದ ತರಬೇತಿ ನಡೆಯಲಿದ್ದು, ಆಸಕ್ತರು ಹೆಸರು ನೊಂದಾಯಿಸಬಹುದು ಎಂದು ಸಮಿತಿ ಅಧ್ಯಕ್ಷ ಡಾ. ರಾಮಕೃಷ್ಣ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More articles

Latest article