Sunday, April 7, 2024

ಮಧ್ವ: ಯಕ್ಷಕೂಟ ತರಬೇತಿ ಸಂಘ ಉದ್ಘಾಟನೆ

ಬಂಟ್ವಾಳ: ಶ್ರೀ ಮಧ್ವಾಚಾರ್ಯರಿಂದ ಆರಂಭಗೊಂಡ ಯಕ್ಷಗಾನ ಅವರು ನಡೆದಾಡಿದ, ವಿಶ್ರಮಿಸಿದ ಪುಣ್ಯ ನೆಲವಾದ ಮಧ್ವದ ಮಧ್ವಕಟ್ಟೆಯಲ್ಲಿ ಉದ್ಘಾಟನೆಗೊಂಡ ಯಕ್ಷಗಾನ ಸಂಘದ ಮೂಲಕ ವಿಜೃಂಭಿಸಲಿ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರು ನುಡಿದರು.
ಶುಕ್ರವಾರ ಕಾರ್ಯ ನಿಮಿತ್ತ ಆಗಮಿಸಿದ ಅವರು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ದಲ್ಲಿ ನೂತನವಾಗಿ ಆರಂಭಗೊಂಡ ಯಕ್ಷಗಾನ ತರಬೇತಿ ಕೇಂದ್ರ ಯಕ್ಷ ಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಶ್ರೀ ಮಧ್ವಾಚಾರ್ಯರಿಂದ ಯಕ್ಷಗಾನ ಕಲೆ ಆರಂಭವಾಯಿತೆನ್ನುವ ವಾಡಿಕೆ ಇದ್ದು, ಅವರು ಧಾರಣೆ ಮಾಡಿದ ಚಿಹ್ನೆಗಳನ್ನು ಯಕ್ಷಗಾನ ಪಾತ್ರಗಳ ಮುಖವರ್ಣಿಕೆಗಳಲ್ಲಿ ಬಳಸುತ್ತಾರೆ. ಅವರ ಶಿಷ್ಯ ನರಹರಿ ತೀರ್ಥರೂ ಈ ಬಗ್ಗೆ ತಿಳಿಸಿದ್ದಾರೆ ಎಂದು ಹೇಳಿದ ಅವರು ಯಕ್ಷಗಾನ ಕಲೆ ಶ್ರೇಷ್ಠ ಕಲೆಯಾಗಿದ್ದು ಜಗತ್ತಿನಾದ್ಯಂತ ಖ್ಯಾತಿ ಪಡೆದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರಾರಂಭಗೊಂಡ ಯಕ್ಷಗಾನ ಕಲೆಗೆ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಕಾರ್ಯವಾಗಿದ್ದು, ಯಕ್ಷ ಕೂಟ ಯಶಸ್ವಿಯಾಗಲಿ ಎಂದು ಹೇಳಿದರು.
ಮಧ್ವ ಯಕ್ಷ ಕೂಟ ಸಂಘದ ಸಂಚಾಲಕ ಭಾಸ್ಕರ ಶೆಟ್ಟಿ ಅವರು ಪ್ರಸ್ತಾವಿಸಿ ಮಾತನಾಡಿ, ಶ್ರೀ ಮಧ್ವಾಚಾರ್ಯರು ವಿಶ್ರಮಿಸಿದ ಮಧ್ವಕಟ್ಟೆಯಿಂದ ಮಧ್ವ ಎಂದೇ ಹೆಸರಾದ ನಮ್ಮೂರಿನಲ್ಲಿ ಶ್ರೀ ಪೇಜಾವರ ಸ್ವಾಮೀಜಿ ಅವರಿಂದ ನಿರ್ಮಿತವಾದ ಮಧ್ವಕಟ್ಟೆಯಲ್ಲಿ ಯಕ್ಷಗಾನ ಆಸಕ್ತರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ನಡೆಸಲು ಉದ್ದೇಶಿಸಲಾಗಿದೆ ಎಂದರು.
ವಗ್ಗ ಹಾ.ಉ.ಸ.ಸಂಘದ ಅಧ್ಯಕ್ಷ ಶಿವಪ್ಪ ಗೌಡ ನಿನ್ನಿಕಲ್ಲು, ಗ್ರಾ.ಪಂ.ಉಪಾಧ್ಯಕ್ಷೆ ಭವಾನಿ, ಸದಸ್ಯ ಆನಂದ ಮಧ್ವ, ಪ್ರಮುಖರಾದ ಜಯಶಂಕರ ಉಪಾಧ್ಯಾಯ, ರಾಜ್ ಪ್ರಸಾದ್ ಆರಿಗ, ಶ್ರೀಪತಿ ಮುಚ್ಚಿನ್ನಾಯ, ನಾರಾಯಣ ಕೆರ್ಮುನ್ನಾಯ, ತಿಮ್ಮಪ್ಪ ಶೆಟ್ಟಿ ಪಾತಿಲ, ರಾಮಣ್ಣ ಶೆಟ್ಟಿ, ವಿಶ್ವನಾಥ ಶೆಟ್ಟಿ, ಸಂಜೀವ ಕುಲಾಲ್, ಸಂಜೀವ ಶೆಟ್ಟಿ, ಕಿಶೋರ್ ಶೆಟ್ಟಿ ಮೂಡಾಯೂರು, ಭಾಗವತ ಗಣೇಶ್ ಸಾಲ್ಯಾನ್, ನಾರಾಯಣ ಶೆಟ್ಟಿ ಮಧ್ವ, ಗೋಪಾಲಕೃಷ್ಣ ಮಧ್ವ,ಮೋಹನಂದ ಪೂಜಾರಿ, ಸುಜಾತಾ ಭಾಸ್ಕರ ಶೆಟ್ಟಿ, ವನಜಾ ಸಂಜೀವ ಶೆಟ್ಟಿ, ಸಾಕ್ಷಿ ಶೆಟ್ಟಿ ಮತ್ತಿತರರಿದ್ದರು.
ಭಾಸ್ಕರ ಶೆಟ್ಟಿ ಅವರು ಸ್ವಾಗತಿಸಿ,ಯುವರಾಜ ಶೆಟ್ಟಿ ಕಜೆಬಲ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದುರಾತಿಥ್ಯ ಯಕ್ಷಗಾನ ತಾಳಮದ್ದಳೆ ನಡೆಯಿತು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...