Tuesday, April 9, 2024

ಹೊಸ ಬಾಂಬ್ ಸಿಡಿಸಿದ ಶೋಭಾ ಕರಂದ್ಲಾಜೆ

ಮಂಗಳೂರು: ಮಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದ ಬೆನ್ನಲ್ಲೇ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಷಯವಾಗಿ ಶೋಭಾ ಕರಂದ್ಲಾಜೆ ಮಾತನಾಡಿ, ಸರ್ಕಾರ ಪರಿಹಾರ ಘೋಷಣೆ ಮಾಡಿದೆ ಅಷ್ಟೆ. ಪರಿಹಾರ ನೀಡಿಲ್ಲ. ಮಂಗಳೂರು ಗಲಭೆಯಲ್ಲಿ ಮೃತಪಟ್ಟವರು ಅಪರಾಧಿಗಳು ಅಂತ ಸಾಬೀತಾದ್ರೆ ಪರಿಹಾರ ವಾಪಾಸ್ ಪಡೆಯುವ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಪರಿಹಾರದ ವಿಚಾರವನ್ನು ಆಲೋಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿ ಅಪರಾಧಿಗಳಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಹೊಸ ಬಾಂಬ್ ಹಾಕಿದ್ದಾರೆ.

ಮಂಗಳೂರು ಹಿಂಸಾಚಾರಕ್ಕೆ ಪಿ ಎಫ್ ಐ-ಕೆಎಫ್ ಡಿ ಕಾರಣ ಆರೋಪಿಸಿ, ಇಂತಹವರನ್ನು ಜೈಲಿನಿಂದ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಹಾಗಾಗಿ ಈ ಸಂಘಟನೆಗಳು ಕೂಡಲೇ ನಿಷೇಧ ಆಗಬೇಕು ಎಂದರು. ಅಷ್ಟೇ ಅಲ್ಲ ಮಂಗಳೂರಿನ ಹಾಸ್ಟೆಲ್ ಮತ್ತು ರೂಂ ಗಳಲ್ಲಿರುವ ಕೇರಳ ವಿದ್ಯಾರ್ಥಿಗಳು ಗಲಭೆ ಮಾಡುತ್ತಿದ್ದಾರೆ. ವಿದ್ಯಾಭ್ಯಾಸ ಮುಗಿದ ಬಳಿಕ ಕೂಡ ಇಲ್ಲೆ ಇದ್ದು ಗಲಭೆ ಮಾಡುತ್ತಿದ್ದಾರೆ. ಶಾಂತಿ ಬಯಸುವ ಮುಸಲ್ಮಾನರು ಈ ಸಂಘಟನೆಗಳಲ್ಲಿ ಇಲ್ಲ ಎಂದು ಹೇಳಿದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...