Monday, April 22, 2024

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾವಿ ಪದವಿ ಪೂರ್ವ ಕಾಲೇಜು: ಲಲಿತ ಕಲಾ ಸಂಘದ ಆಶ್ರಯದಲ್ಲಿ ಉಪನ್ಯಾಸ

ಬಂಟ್ವಾಳ: ಸಂಸ್ಕೃತಿ ನಮ್ಮ ಜೀವನದ ಒಂದು ಭಾಗವಾಗಿದೆ. ಅದು ರಾಷ್ಟ್ರದ ನಿಜವಾದ ಕಲೆ. ನಾವು ಮಾತನಾಡುವ ಭಾಷೆ ಕೂಡಾ ಒಂದು ಸಂಸ್ಕೃತಿ ಎಂದು ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದುರ್ಗಾಪ್ರಸಾದ್ ಶೆಟ್ಟಿ ಹೇಳಿದರು.
ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಲಲಿತ ಕಲಾ ಸಂಘದ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಯಕ್ಷಗಾನ, ಅಂಕ ಆಯನ, ಕೋಲ ಕಂಬುಲ ಇದೆಲ್ಲವೂ ಸಂಸ್ಕೃತಿಯ ಭಾಗವಾಗಿದೆ. ಭರತನಾಟ್ಯ ಕೂಡಾ ನಮ್ಮ ನೆಲದ ಒಂದು ಸಂಸ್ಕೃತಿಯಾಗಿದೆ. ಬೀದಿನಾಟಕ, ಏಕಾಂಗ ನಾಟಕಗಳು, ಏಕಾಭಿನಯ, ಪ್ರಹಸನಗಳೂ ಕೂಡಾ ಸಂಸ್ಕೃತಿಯ ಭಾಗವೇ ಆಗಿದೆ. ವಿದ್ಯಾರ್ಥಿಗಳು ಇವುಗಳನ್ನೆಲ್ಲಾ ನೋಡಿ ಕಲಿಯಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿದ್ದರು. ಲಲಿತ ಕಲಾ ಸಂಘದ ಅಧ್ಯಕ್ಷೆ, ಇತಿಹಾಸ ಉಪನ್ಯಾಸಕಿ ಭಾರತಿ ವಸಂತ ಕುಮಾರ್ ಅತಿಥಿ ಪರಿಚಯದೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನನ್ಯಾ, ಶ್ವೇತಾ ಪೈ, ಭುವನಾ ಚಂದ್ರಹಾಸ, ಸಂಜನಾ ಪೈ ಪ್ರಾರ್ಥಿಸಿದರು. ಲಲಿತ ಕಲಾ ಸಂಘದ ಕಾರ್ಯದರ್ಶಿ ಸಹನಾ ಜೆ.ಪಿ. ವಂದಿಸಿದರು. ವಿದ್ಯಾರ್ಥಿನಿ ಅಫ್ರೀಮಾ ಆಯಿಷಾ ಕಾರ್ಯಕ್ರಮ ನಿರೂಪಿಸಿದರು.

More from the blog

ಮತದಾನ ಬಹಿಷ್ಕಾರ ; ಕೋವಿ ಠೇವಣಿದಾರರಿಂದ ಫ್ಲೆಕ್ಸ್ ಅಳವಡಿಕೆ

ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲಿ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ‌...

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...