ಬೆಂಗಳೂರು: ಏಪ್ರಿಲ್ 5 ಮತ್ತು 9ರಂದು ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ ಎಂಬ ಸುದ್ದಿ ಬಹುತೇಕ ಮಾಧ್ಯಮಗಳಲ್ಲಿ ಇಂದು ಬೆಳಗ್ಗೆ ವರದಿಯಾಗಿತ್ತು. ಅದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫಿಕೇಶನ್ ಅನ್ನು ಎಲ್ಲಾ ಗ್ರಾಮ ಪಂಚಾಯತ್ ಗಳಿಗೂ ಕಳುಹಿಸಿಕೊಡಲಾಗಿತ್ತು. ಅದನ್ನು ಆಧಾರವಾಗಿ ಇಟ್ಟುಕೊಂಡು ಮಾಧ್ಯಮಗಳು ಸುದ್ದಿ ಮಾಡಿದ್ದವು. ಆದರೆ, ಇದು ನಕಲಿ ಗೆಜೆಟ್ ನೋಟಿಫಿಕೇಶನ್ ಎಂಬುದು ತಿಳಿದುಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೆಲ ಅಧಿಕಾರಿಗಳು ಈ ನಕಲಿ ನೋಟಿಫಿಕೇಶನ್ ಹಿಂದಿರುವ ಸಾಧ್ಯತೆ ಇದೆ. ಈ ನಕಲಿ ಸೂಚನಾ ಪತ್ರ ಗ್ರಾಮ ಪಂಚಾಯತ್ ಕಚೇರಿಗಳಿಗೆ ಹೋಗಿದ್ದು ಹೇಗೆ? ಈ ನಕಲಿ ಪತ್ರವನ್ನು ತಯಾರಿಸಿದವರು ಯಾರು ಎಂದು ಇಲಾಖೆಯಲ್ಲಿ ಆಂತರಿಕ ತನಿಖೆ ನಡೆಯುತ್ತಿದೆ ಇದರ ಬಗ್ಗೆ ಇಂದು ಮಧ್ಯಾಹ್ನ ಸ್ಪಷ್ಟನೆ ನೀಡಲಿದ್ದಾರೆ ಸಚಿವ ಕೆ.ಎಸ್. ಈಶ್ವರಪ್ಪ.