ಕಲ್ಲಡ್ಕ: ಜೀವನ ಶಿಕ್ಷಣವನ್ನು ಕಲಿಸುವ ಶಿಕ್ಷಣ ಸಂಸ್ಥೆ ಸಮಾಜಕ್ಕೆ ಅವಶ್ಯಕ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುತ್ತಾ, ಸಂಸ್ಕಾರಯುತ ಸಮಾಜಕ್ಕಾಗಿ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಸಂಸ್ಕೃತಿಯನ್ನು ಶ್ರೀರಾಮ ವಿದ್ಯಾಸಂಸ್ಥೆಗಳು ಅಳವಡಿಸಿಕೊಂಡಿದೆ ಎಂದು ಉಡುಪಿ ಜಿಲ್ಲೆಯ ನಿವೃತ ದೈಹಿಕ ಶಿಕ್ಷಣ ಅಧಿಕಾರಿ ಶ್ರೀ ಸೀತಾನದಿ ವಿಠಲ ಶೆಟ್ಟಿ ಹೇಳಿದರು.
ಅವರು ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ ನ್ಯಾಯವಾದಿ ವಿಜಯಾನಂದ, ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್ ಹಾಗೂ ಮಲ್ಲಿಕಾ ಶೆಟ್ಟಿ ಮತ್ತು ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಹರಣಿ ಉಪಸ್ಥಿತರಿದ್ದರು.
ಶೈಕ್ಷಣಿಕ, ವಿಜ್ಞಾನ, ಸಂಸ್ಕೃತ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪುರಸ್ಕರಿಸಿದ ವಿದ್ಯಾರ್ಥಿಗಳ ಪಟ್ಟಿಯನ್ನು ಉಪನ್ಯಾಸಕರು ವಾಚಿಸಿದರು.
ಕಾಲೇಜಿನ ಪ್ರಾಂಶುಪಾಲ ವಸಂತ ಬಲ್ಲಾಳ್ ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ತಿರುಮಲೇಶ್ವರ ಪ್ರಶಾಂತ್ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಕಿ ಜಯಲಕ್ಷ್ಮೀ ಕೆ. ಕಾರ್ಯಕ್ರಮ ನಿರೂಪಿಸಿದರು.