ಬಂಟ್ವಾಳ: ಕಾವಳಪಡೂರು ವಗ್ಗ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಗ್ರಾಹಕರ ಹಿತರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆಯ ಜೈನ್ ಪ್ರೌಢಶಾಲೆಯ ಶಿಕ್ಷಕ ರಾಯಿ ರಾಜ್ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಶೇಕ್ ಆದಂ ಸಾಹೇಬ್ ನೆಲ್ಯಾಡಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.