Saturday, April 13, 2024

ಸಜೀಪನಡು: ಯು.ಟಿ ಖಾದರ್ ಅವರ ಕ್ಷೇತ್ರಾಭಿವೃದ್ದಿ ನಿಧಿಯ ಅನುದಾನದಲ್ಲಿ ನಿರ್ಮಾಣಗೊಂಡ ತಡೆಗೋಡೆ ಉದ್ಘಾಟನೆ

ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆ ಕುಟುಂಬಿಕರ ಪರಿವಾರ ದೈವಸ್ಥಾನದಲ್ಲಿ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ಕ್ಷೇತ್ರಾಭಿವೃದ್ದಿ ನಿಧಿಯಿಂದ ರೂ 15ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ತಡೆಗೋಡೆಯನ್ನು ದ.ಕ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಮಾಜಿ ಉಪಾಧ್ಯಕ್ಷ ಎಸ್.ಅಬೂಬಕ್ಕರ್ ಸಜೀಪ ಉದ್ಘಾಟಿಸಿದರು.

ಇದೇ ಸಂಧರ್ಭದಲ್ಲಿ ಶ್ರೀ ನಾಗದೇವರ ಪ್ರತಿಷ್ಟಾಪನೆಯು ಬಹಳ ವಿಜೃಂಭನೆಯಿಂದ ನಡೆಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಸಮಾಜಸೇವೆಗಾಗಿ ಎಸ್.ಅಬೂಬಕ್ಕರ್ ಸಜೀಪ, ಹಾಗೂ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದ ದೇರಾಜೆ ಕುಟುಂಬದ ದಿ. ರಾಘವ ಪೂಜಾರಿಯವರ ಪುತ್ರನಾದ ಶಶಾಂಕ್ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಪುರುಶೋತ್ತಮ ಪೂಜಾರಿ ದೇರಾಜೆ, ರಮೇಶ್ ಬಾಗಲಕೋಡಿ, ಆನಂದ ಸೋಮೇಶ್ವರ, ರಂಜಿತ್ ದೇರಾಜೆ, ಉದಯ ಬಜಾಲ್, ದೈವಪಾತ್ರಿಯಾದ ರಾಮ ಬರೆ ದೇರಾಜೆ ಉಪಸ್ಥಿತರಿದ್ದರು.

More from the blog

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.