Friday, April 5, 2024

ವಿಟ್ಲ: ಕಲಾವಿದರಿಗೆ ಅಭಿನಂದನೆ

ವಿಟ್ಲ: ಕುಂದಾಪುರದಲ್ಲಿ ನಡೆದ ಯಶಸ್ವಿ ಕಲಾವೃಂದ, ಕೈಲಾಸ ಕಲಾಕ್ಷೇತ್ರ ತೆಕ್ಕಟ್ಟೆ ಅವರು ನಡೆಸಿದ ರಾಜ್ಯ ಮಟ್ಟದ ತೆಂಕು ಬಡಗು ಯಕ್ಷಗಾನ ತಾಳ ಮದ್ದಳೆ ‘ದೃಶ್ಯ ಸ್ಪರ್ಧಾ ಪ್ರಸ್ತುತಿ’ಯಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲದ ಯಕ್ಷಸಿಂಧೂರ ಪ್ರತಿಷ್ಠಾನದ ಕಲಾವಿದರನ್ನು ವಿಟ್ಲ ಭಗವತೀ ದೇವಸ್ಥಾನದಲ್ಲಿ ಅಭಿನಂದಿಸಲಾಯಿತು.
ದೇವಸ್ಥಾನದ ವ್ಯವಸ್ಥಾಪಕ ಕೇಶವ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಜೆಸಿಐ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪ್ರತಿಷ್ಠಾನದ ಅಧ್ಯಕ್ಷ ಚಣಿಲ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ರಮೇಶ್ ಬಿ ಕೆ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ’ಶಾಂಭವಿ ವಿಲಾಸ’ ಅಭ್ಯಾಸಿ ತಾಳಮದ್ದಳೆ ನಡೆಸಲಾಯಿತು.
ಕಲಾವಿದರಾಗಿ ಭಾಗವತರಾಗಿ ಪ್ರಭಾ ಹರೀಶ್ ಬಾಳೆಕಾನ, ಚೆಂಡೆಮದ್ದಳೆಯಲ್ಲಿ ಅಭಿಷೇಕ್ ಬಿ ಚಣಿಲ, ಕುಮಾರ ಆಚಾರ್ಯ, ಶ್ರೀಕೃಷ್ಣ ಜೆಡ್ಡು, ಧನ್ಯಶ್ರೀ ಚಣಿಲ ಮತ್ತು ಅಕ್ಷರ ಶ್ಯಾಮ ಸಹಕರಿಸಿದರು. ಅರ್ಥಧಾರಿಗಳಾಗಿ ಚಣಿಲ ಸುಬ್ರಹ್ಮಣ್ಯ ಭಟ್, ಎಲ್ ಎನ್ ಭಟ್ ಮಳಿ, ಪೂರ್ಲಪ್ಪಾಡಿ ಈಶ್ವರ ಭಟ್, ಜಗನ್ನಾಥ ಪುಣಚ, ಮಂಜುನಾಥ ಆಚಾರ್ಯ, ಪರಮೇಶ್ವರ ಹೆಗಡೆ, ಸಂಕಪ್ಪ ಗೌಡ ಮತ್ತು ರಮೇಶ್ ಬಿ.ಕೆ ಭಾಗವಹಿಸಿದ್ದರು.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.