Wednesday, April 17, 2024

ಆರೋಗ್ಯ ಕ್ಷಮತೆ, ಮಾನಸಿಕ ಆರೋಗ್ಯ, ರೋಗ ನಿರೋಧಕ ಶಕ್ತಿ ಉತ್ತಮಗೊಳ್ಳಲು ಯೋಗ ಸಹಕಾರಿ: ಡಾ. ಸುರೇಂದ್ರ ನಾಯಕ್

ಬಂಟ್ವಾಳ: ಆರೋಗ್ಯ ಕ್ಷಮತೆ, ಮಾನಸಿಕ ಆರೋಗ್ಯ, ರೋಗ ನಿರೋಧಕ ಶಕ್ತಿ ಉತ್ತಮಗೊಳ್ಳಲು ಯೋಗ ಸಹಕಾರಿ ಎಂದು ನಿವೃತ್ತ ವೈದ್ಯಾಧಿಕಾರಿ ಡಾ.ಸುರೇಂದ್ರ ನಾಯಕ್ ಅವರು ಹೇಳಿದರು.
ಅವರು ಬಿಸಿರೋಡಿನ ಕೈಕಂಬ ಖಾಸಗಿ ಹೋಟೆಲ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಿ.ಮೂಡ, ಇವರ ವತಿಯಿಂದ ಪ್ರತಿ ಶುಕ್ರವಾರ ನಡೆಯಲಿರುವ
ಯೋಗ ಶಿಬಿರದಲ್ಲಿ ಭಾಗವಹಿಸಿ ಮುಖ್ಯ ಅತಿಥಿಯಾಗಿ ಮಾತನಾಡಿ ದರು.ಯೋಗ ಪ್ರತಿಯೊಬ್ಬ ವ್ಯಕ್ತಿಯ ಮಾಡಿದರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಅವರು ಹೇಳಿದರು.

ಕಟ್ಟಡ ಮಾಲಕ, ಉದ್ಯಮಿ ದಾಮೋದರ ಸಾಲಿಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಮಾಜಿ ಪುರಸಭಾ ಸದಸ್ಯ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧ್ಯಕ್ಷ ಸದಾಶಿವ ಬಂಗೇರ ಮಾತನಾಡಿ, ಆರೋಗ್ಯದ ಸುಧಾರಣೆಗಾಗಿ ನಗರ ಆರೋಗ್ಯ ಕೇಂದ್ರದ ಮೂಲಕ ಯೋಗ ತರಭೇತಿಯನ್ನು ಸರಕಾರ ಮಾಡುವ ಯೋಜನೆ ಮಾಡಿದೆ, ಇದರ ಸದುಪಯೋಗ ಪಡೆದುಕೊಂಡು ಆರೋಗ್ಯ ವಂತರಾಗಿ ಎಂದು ಅವರು ಹೇಳಿದರು.
ಇಂತಹ ಸರಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಹಾಗೂ ಪ್ರತಿಯೋಬ್ಬರಿಗೂ ಮಾಹಿತಿ ಸಿಗುವ ನಿಟ್ಟಿನಲ್ಲಿ ಎಲ್ಲರ ಪ್ರಾಮಾಣಿಕ ಪ್ರಯತ್ನ ಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಾಣಿಶ್ರೀ, ಸಿವಿಲ್ ಇಂಜಿನಿಯರ್ ಪ್ರಕಾಶ್ ಯೋಗತರಬೇತಿದಾರರಾದ ಮೈಥಿಲಿ ದನಂಜಯ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...