ಬಂಟ್ವಾಳ: ಭಾರತ ಸಂಸ್ಕೃತಿ ಪ್ರತಿಷ್ಠಾನ 2019-20 ಸಾಲಿನ ಮಹಾಭಾರತ ಪರೀಕ್ಷೆಯಲ್ಲಿ ಕಲ್ಲಡ್ಕ ಹನುಮಾನ್ ನಗರದ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ರಾಜೇಶ್ ಎಂ. ರೈ ರಾಜ್ಯ ಮಟ್ಟದಲ್ಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಜಿಲ್ಲಾ ಮಟ್ಟದಲ್ಲಿ ಧನ್ಯಶ್ರೀ ಪ್ರಥಮ ಸ್ಥಾನ, ಪೂರ್ಣಶ್ರೀ ರೈ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ವಿದ್ಯಾಕೇಂದ್ರ ಅಧ್ಯಕ್ಷರು, ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿರುತ್ತಾರೆ.