


ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾತೃಭಾಷಾ ದಿನಾಚರಣೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದರು. ಸಿದ್ದಕಟ್ಟೆ ಸ.ಪ್ರೌ.ಶಾಲೆಯ ಪದವೀಧರ ಸಹಶಿಕ್ಷಕಿ ಮಮತಾ ಪಿ., ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಮಾತೃಭಾಷೆ ತಾಯಿ ಭಾಷೆ, ನಮ್ಮ ಸಂವಹನ ಪರಿಣಾಮಕಾರಿಯಾಗಿ ನಡೆಯಬೇಕಾದರೆ ಮಾತೃಭಾಷೆ ಅನಿವಾರ್ಯ. ನಮ್ಮ ಸಂಸ್ಕೃತಿ ಕಲೆ ಹಾಗೂ ಇತಿಹಾಸವು ಸಂಪದ್ಭರಿತವಾಗಲು ಭಾಷೆಯ ಪಾತ್ರ ಹಿರಿದಾದುದು. ನಮ್ಮ ಭಾಷೆ ಸಂಪದ್ಬರಿತವಾಗಬೇಕಾದರೆ ಅದನ್ನು ಬರವಣಿಗೆ ರೂಪಕ್ಕೆ ತರುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್. ಕೆ. ವಿದ್ಯಾರ್ಥಿಗಳನ್ನುದ್ದೇಶಿಸಿ, ನಮ್ಮ ದಿನನಿತ್ಯದ ವ್ಯವಹಾರದಲ್ಲಿ ಮಾತೃ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಮಾತೃಭಾಷೆಯ ಅಸ್ತಿತ್ವವನ್ನು ಕಾಪಾಡಬೇಕು. ಮಾತೃ ಭಾಷೆಯನ್ನು ಉಳಿಸಿ-ಬೆಳೆಸುವ ಜವಾಬ್ದಾರಿಯೊಂದಿಗೆ ಉಳಿದ ಭಾಷೆಗಳನ್ನು ಗೌರವಿಸುವ ಭಾಷಾ ಸಹಿಷ್ಣುತೆಯನ್ನು ಬೆಳೆಸಿಕೊಳ್ಳವ ಗುಣ ಇರಬೇಕು ಎಂದರು.
ವಿದ್ಯಾರ್ಥಿಗಳಿಗೆ ಮಾತೃಭಾಷಾ ಪ್ರೇಮವನ್ನು ಬಿಂಬಿಸುವ ಚಲನಚಿತ್ರವನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದ ಕುರಿತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ನಸೀಮಾ ಬೇಗಂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದ್ವಿತೀಯ ಬಿಕಾಂ ನ
ಪ್ರಜ್ವಲ್ ಸ್ವಾಗತಿಸಿ, ತೃತೀಯ ಬಿಕಾಂ ನ ಮೆಲ್ರಿಯ ವಂದಿಸಿದರು. ದ್ವಿತೀಯ ಬಿಎ ವಿದ್ಯಾರ್ಥಿಗಳಾದ ಮನೀಶ್ ಪ್ರಾರ್ಥಿಸಿ, ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ವಿನಾಯ ಎಂ. ಎಸ್. ಕಾರ್ಯಕ್ರಮ ಆಯೋಜಿಸಿದ್ದರು.
ಪ್ರಜ್ವಲ್ ಸ್ವಾಗತಿಸಿ, ತೃತೀಯ ಬಿಕಾಂ ನ ಮೆಲ್ರಿಯ ವಂದಿಸಿದರು. ದ್ವಿತೀಯ ಬಿಎ ವಿದ್ಯಾರ್ಥಿಗಳಾದ ಮನೀಶ್ ಪ್ರಾರ್ಥಿಸಿ, ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ವಿನಾಯ ಎಂ. ಎಸ್. ಕಾರ್ಯಕ್ರಮ ಆಯೋಜಿಸಿದ್ದರು.


