ಬಂಟ್ವಾಳ: ಕೊರೋನಾ ವೈರಸ್ ಭೀತಿ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ದ್ವಿತೀಯ ಪಿ.ಯು. ಪರೀಕ್ಷೆ ರದ್ದು ಮಾಡುವ ವಿಷಯವಾಗಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ನಾಳೆ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆ ಮಾ.31ರ ನಂತರ ನಡೆಯಲು ತೀರ್ಮಾನಿಸಿದೆ.