Wednesday, October 18, 2023

ಒಳಮೀಸಲಾತಿ ಜಾರಿಗೆ ತರುವಂತೆ ಸರಕಾರಕ್ಕೆ ಒತ್ತಾಯ: ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ

Must read

ಬಂಟ್ವಾಳ: ಒಳ ಮೀಸಲಾತಿ ಜಾರಿಗೆ ತರುವಂತೆ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಪ್ರಸ್ತುತ ಇರುವ ಮೀಸಲಾತಿಯಿಂದಾಗಿ ಬಡ ಕುಟುಂಬದ ಜನರಿಗೆ ಸರಕಾರದ ಉದ್ಯೋಗ ಹಾಗೂ ಸರಕಾರದ ಸವಲತ್ತಗಳಲ್ಲಿ ಬಹಳಷ್ಟು ಅನ್ಯಾಯವಾಗುತ್ತಿದೆ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಒಳಮೀಸಲಾತಿ ಜಾರಿಗೆ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.
ಬಡಜನರಿಗೆ ಅನ್ಯಾಯವಾಗುವುದರಿಂದ ಪ್ರಸ್ತುತ ಇರುವ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಸರಕಾರದ ತಕ್ಷಣ ಜಾರಿಗೆ ತರಬೇಕು ಎಂದು ಸಿ.ಎಂ.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಡವರ ಪಾಲಿಗೆ ಸರಕಾರದ ಕರುಣೆ ತೋರಬೇಕಾಗಿದೆ. ಸರ್ಕಾರ ಈ ಬಗ್ಗೆ ಗಮನಹರಿಸದಿದ್ದರೆ ದೊಡ್ಡ ಮಟ್ಟದಲ್ಲಿ ಸಮಾವೇಶ ಮಾಡಿ ಸರಕಾರದ ಗಮನಹರಿಸುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

More articles

Latest article