ಬಂಟ್ವಾಳ: ಅಪೌಷ್ಟಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರಕಾರದ ಪೋಷಣ್ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ಜಾಗೃತಿಗಾಗಿ ಬಿಸಿರೋಡಿಗೆ ಅಗಮಿಸಿದ ಪೋಷಣ್ ಅಭಿಯಾನ ರಥವನ್ನು ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಸ್ವಾಗತಿಸಿ ಚಾಲನೆ ನೀಡಿದರು.
ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಬಂಟ್ವಾಳ ಶಿಶು ಯೋಜನಾಧಿಕಾರಿ ಗಾಯತ್ರಿ ಕಂಬಳಿ, ವಿಟ್ಲ ಯೋಜನಾಧಿಕಾರಿ ಸುಧಾ ಜೋಶಿ ಹಾಗೂ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.