Wednesday, October 25, 2023

ನಂದಾವರ ದೇವಸ್ಥಾನದ ಕಚೇರಿಯಲ್ಲಿ ಹೃದಯಾಘಾತದಿಂದ ನಿಧನ

Must read

ಬಂಟ್ವಾಳ: ಹೃದಯಘಾತದಿಂದ ದೇವಸ್ಥಾನದ ಕಚೇರಿಯಲ್ಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ
ನಂದಾವರ ನಿವಾಸಿ ಮಹಾಬಲ ಗಟ್ಟಿ (87) ಮೃತಪಟ್ಟ ವ್ಯಕ್ತಿ.
ಇವರು ಕೆಲವು ವರ್ಷಗಳಿಂದ ಬಿ.ಪಿ.ಶುಗರ್ ಸಮಸ್ಯೆಯಿಂದ ಇದ್ದರೂ ಕೂಡ ದೇವಸ್ಥಾನದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು.
ಎಳೆಯ ವಯಸ್ಸಿನಲ್ಲಿಯೇ 1945 ರಿಂದ ನಂದಾವರ ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ಇವರು ಇತ್ತೀಚಿನ ಕೆಲ ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು.
ಅ ಬಳಿಕ ದೇವಸ್ಥಾನದ ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.
ನಂದಾವರ ಕ್ಷೇತ್ರದ ಜಾತ್ರೋತ್ಸವದ ಸಂದರ್ಭದಲ್ಲಿ ಸಂಪೂರ್ಣ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸುತ್ತಿದ್ದರು.
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದ ಎನ್.ಮಹಾಬಲ ಗಟ್ಟಿ. ಇವರು ಇಂದು ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಕಚೇರಿಯ ಬಳಿ ಕುಳಿತು ಕೊಂಡಿದ್ದವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಆಡಳಿತ ಮಂಡಳಿಯ ಮೂಲಗಳು ತಿಳಿಸಿವೆ.
ಇವರು ನಂದಾವರ ಶ್ರೀ ವಿಘ್ನೇಶ್ವರ ಸೇವಾ ಸಮಿತಿಯ ಗೌರವ ಸಲಹೆಗಾರರಾಗಿದ್ದರು.
ಇವರು ಪತ್ನಿ ಹಾಗೂ ಎರಡು ಗಂಡು, ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಕಾರ್ಯ ನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳು ಸಂತಾಪ ವ್ಯಕ್ತಪಡಿಸಿದರು.

More articles

Latest article