Monday, October 23, 2023

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿ. ನೇಮಕ

Must read

ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಮುನ್ನಡೆಸುವವರು ಯಾರು ಎಂಬ ಚರ್ಚೆ ಆರಂಭವಾಗಿತ್ತು. ಇದೀಗ ಎಲ್ಲದಕ್ಕೂ ಉತ್ತರ ಸಿಕ್ಕಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಿಸಿದೆ. ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಅವರನ್ನು ನೇಮಿಸಲಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ.
ಎಐಸಿಸಿ ಬುಧವಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಮಧುಸೂದನ್ ಮಿಸ್ತ್ರಿ ನೇತೃತ್ವದ ಹೈಕಮಾಂಡ್ ನಾಯಕರ ನಿಯೋಗ ರಾಜ್ಯಕ್ಕೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು? ಎಂದು ವಿವಿಧ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿತ್ತು.

More articles

Latest article